ADVERTISEMENT

ಬೆಳಗಾವಿ: ಶರದ್‌ ಪವಾರ್‌ಗೆ ಪುಷ್ಪವೃಷ್ಟಿಯ ಸ್ವಾಗತ

​ಪ್ರಜಾವಾಣಿ ವಾರ್ತೆ
Published 11 ಮೇ 2022, 7:25 IST
Last Updated 11 ಮೇ 2022, 7:25 IST
ಶರದ್‌ ಪವಾರ್‌ ಅವರಿಗೆ ಪಕ್ಷದ ಕಾರ್ಯಕರ್ತರು ಬುಧವಾರ ಅದ್ಧೂರಿ ಸ್ವಾಗತ ನೀಡಿದರು.
ಶರದ್‌ ಪವಾರ್‌ ಅವರಿಗೆ ಪಕ್ಷದ ಕಾರ್ಯಕರ್ತರು ಬುಧವಾರ ಅದ್ಧೂರಿ ಸ್ವಾಗತ ನೀಡಿದರು.   

ಬೆಳಗಾವಿ: ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕಾಗಿ ಇಲ್ಲಿಗೆ ಬಂದಿದ್ದ ಮಹಾರಾಷ್ಟ್ರದ ನಾಯಕ, ಎನ್‌ಸಿಪಿ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಶರದ್‌ ಪವಾರ್‌ ಅವರಿಗೆ ಪಕ್ಷದ ಕಾರ್ಯಕರ್ತರು ಬುಧವಾರ ಅದ್ಧೂರಿ ಸ್ವಾಗತ ನೀಡಿದರು.

ರಾಣಿ ಚನ್ನಮ್ಮ ವೃತ್ತದಲ್ಲಿ ಅವರನ್ನು ಸಂಭ್ರಮದಿಂದ ಬರಮಾಡಿಕೊಂಡರು. ಅವರಿದ್ದ ಕಾರ್‌ಗೆ ಜೆಸಿಬಿಯಿಂದ ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು. ಕ್ರೇನ್‌ನಲ್ಲಿ ತಂದಿದ್ದ ಭಾರಿ ಗಾತ್ರದ ಹೂವಿನ ಹಾರವನ್ನು ಹಾಕುವ ಮೂಲಕ ಅಭಿಮಾನ ಮೆರೆದರು.

ಅವರಿದ್ದ ಕಾರ್‌ಗೆ ಜೆಸಿಬಿಯಿಂದ ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.