ADVERTISEMENT

ಮೇ 11ರಂದು ಬೆಳಗಾವಿಯಲ್ಲಿ ಶರದ್‌ ಪವಾರ್‌ ಪ್ರವಾಸ

​ಪ್ರಜಾವಾಣಿ ವಾರ್ತೆ
Published 10 ಮೇ 2022, 11:39 IST
Last Updated 10 ಮೇ 2022, 11:39 IST
ಶರದ್ ಪವಾರ್
ಶರದ್ ಪವಾರ್   

ಬೆಳಗಾವಿ: ‘ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರು ಮೇ 11ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಚನ್ನಮ್ಮ ವೃತ್ತದಲ್ಲಿ ಸತ್ಕರಿಸಲಾಗುವುದು‘ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್.ಹರಿ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪವಾರ್‌ ಅವರು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.

‘ಮುಂಬರುವ ಪ್ರತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 18 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಲಾಗುವುದು. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದರು.

ADVERTISEMENT

‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಅದರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.

ಮುಖಂಡರಾದ ಅಮೋಲ ದೇಸಾಯಿ, ಕೆ.ಜಿ. ಪಾಟೀಲ, ನಾರಾಯಣ ಬಸರಗಿ, ದುರ್ಗೇಶ ಮೇತ್ರಿ, ಅಪ್ಪಾಸಾಹೇಬ ನಾಯಕ, ಸುರೇಂದ್ರ ಪಾಲ್ಗೊಂಡಿದ್ದರು.

ಪವಾರ್‌ ಭೇಟಿ: ಪವಾರ್‌ ಅವರು ಕೋವಿಡ್‌ನಿಂದ ಈಚೆಗೆ ನಿಧನರಾದ ತಮ್ಮ ಸ್ನೇಹಿತರಾಗಿದ್ದ ಅರವಿಂದ ಗೋಗಟೆ ಅವರ ಕುಟುಂಬದವರನ್ನು ಮಂಗಳವಾರ ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಅವರನ್ನು ಕೆಎಲ್‌ಇ ಸೊಸೈಟಿ ನಿರ್ದೇಶಕ ಮಹಾಂತೇಶ ಕವಟಗಿಮಠ ಹಾಗೂ ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ಹ ಸಹಕಾರಿಯ ನಿರ್ದೇಶಕಿ ಪ್ರೀತಿ ದೊಡ್ಡವಾಡ ಬರಮಾಡಿಕೊಂಡರು. ಮಹಾರಾಷ್ಟ್ರ ಚಂದಗಡ ಶಾಸಕ ರಾಜೇಶ್‌ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.