ADVERTISEMENT

ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 12:24 IST
Last Updated 21 ಏಪ್ರಿಲ್ 2021, 12:24 IST
ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ
ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ   

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಯಡೂರದ ಕಾಡಸಿದ್ದೇಶ್ವರ ಮಠದ ಪೀಠಾಧಿಪತಿಯೂ ಆಗಿರುವ ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕೋವಿಡ್–19 ದೃಢಪಟ್ಟಿದೆ.

‘ಅವರು ತಾಲ್ಲೂಕಿನ ಯಡೂರದಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಭಕ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಶ್ರೀಶೈಲ ಕ್ಷೇತ್ರದಲ್ಲಿ ನಡೆದ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಯ ಸೇವಾ ಸಿಬ್ಬಂದಿಗೂ ಕೋವಿಡ್ ದೃಢಪಟ್ಟಿದೆ. ಇತ್ತೀಚೆಗೆ ತಮ್ಮ ಮತ್ತು ಸಿಬ್ಬಂದಿ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಎಚ್ಚರಿಕೆ ವಹಿಸಬೇಕು ಎಂದು ಸ್ವಾಮೀಜಿ ತಿಳಿಸಿದ್ದಾರೆ’ ಎಂದು ಮಠದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT