ADVERTISEMENT

‘ಹಿಂದುತ್ವದ ಸ್ನೇಹ ಭೋಜನ’ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 8:30 IST
Last Updated 9 ಜನವರಿ 2021, 8:30 IST

ಬೆಳಗಾವಿ: ಹಿಂದುತ್ವದ ಏಕತೆಗಾಗಿ ಹಿಂದೂ ಕಾರ್ಯಕರ್ತರ 24ನೇ ವರ್ಷದ ಸ್ನೇಹ ಭೋಜನ‌ ಕಾರ್ಯಕ್ರಮವನ್ನು ತಾಲ್ಲೂಕಿನ ನಾವಗೆಯ ಗಣೇಶ ಬಾಗ್ ತೋಟದ ಆವರಣದಲ್ಲಿ ಜ. 10ರಂದು ಬೆಳಗ್ಗೆ 11ಕ್ಕೆ ಆಯೋಜಿಸಲಾಗಿದೆ.

ಮುಖಂಡ ಧನಂಜಯ ಜಾಧವ ಮಿತ್ರ ಪರಿವಾರದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಳಗಾವಿ ಗ್ರಾಮೀಣ ಕ್ಷೇತ್ರ ಹಾಗೂ ನಗರದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಶಾಸಕರಾದ ಮಹಾಂತೇಶ ದೊಡ್ಡಗೌಡರ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ಅಭಯ ಪಾಟೀಲ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮುಖಂಡರಾದ ನಿರ್ಮಲಕುಮಾರ ಸುರಾನಾ, ಮಹೇಶ ಟೆಂಗಿನಕಾಯಿ, ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಸಂಜಯ ಕುಬಲ್, ಮನೋಹರ ಕಡೋಲ್ಕರ್‌ ಪಾಲ್ಗೊಳ್ಳಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT