ADVERTISEMENT

ಕಾರು ಅಪಘಾತ: ಯೋಧ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 12 ಜುಲೈ 2022, 9:19 IST
Last Updated 12 ಜುಲೈ 2022, 9:19 IST
ಓಂಕಾರ ಮಹಾದೇವ ಹಿಂಡಲಗೇಕರ್
ಓಂಕಾರ ಮಹಾದೇವ ಹಿಂಡಲಗೇಕರ್   

ಬೆಳಗಾವಿ: ತಾಲ್ಲೂಕಿನ ರಕ್ಕಸಕೊಪ್ಪ- ಬೆಳಗುಂದಿ ರಸ್ತೆಯಲ್ಲಿ ಸೋಮವಾರ ತಡರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಯೋಧ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಳಗುಂದಿ ನಿವಾಸಿ ಓಂಕಾರ ಮಹಾದೇವ ಹಿಂಡಲಗೇಕರ್ (23) ಮೃತಪಟ್ಟ ಯೋಧ. ಎರಡು ವರ್ಷಗಳ ಹಿಂದೆ ಭಾರತೀಯ ಸೇನೆಗೆ ಸೇರಿದ ಈ ಯೋಧ ಹತ್ತು ದಿನಗಳ ಹಿಂದಷ್ಟೇ ರಜೆಯ ಮೇಲೆ ಗ್ರಾಮಕ್ಕೆ ಮರಳಿದ್ದರು.

ಸೋಮವಾರ ರಾತ್ರಿ ಊರಿನಿಂದ ಹೊರಹೋಗಿದ್ದ ಓಂಕಾರ ತಡರಾತ್ರಿ ಮರಳಿ ತಮ್ಮೂರಿಗೆ ಹೊರಟಿದ್ದರು.

ADVERTISEMENT

ಅತಿ ವೇಗವಾಗಿ ಸಂಚರಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು, ಪಲ್ಟಿಯಾಗಿ ಬಿದ್ದಿತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ತೀವ್ರ ರಕ್ತಸ್ರಾವದಿಂದ ಯೋಧ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.