ADVERTISEMENT

ಕ್ರೀಡಾ ಸಾಮಗ್ರಿಗಳ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 5 ಜುಲೈ 2021, 14:53 IST
Last Updated 5 ಜುಲೈ 2021, 14:53 IST
ಗೋಕಾಕದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಸಾಮಗ್ರಿಗಳ ಕಿಟ್‌ಗಳ ವಿತರಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸೋಮವಾರ ಚಾಲನೆ ನೀಡಿದರು
ಗೋಕಾಕದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ಸಾಮಗ್ರಿಗಳ ಕಿಟ್‌ಗಳ ವಿತರಣೆಗೆ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸೋಮವಾರ ಚಾಲನೆ ನೀಡಿದರು   

ಗೋಕಾಕ (ಬೆಳಗಾವಿ ಜಿಲ್ಲೆ): ‘ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿ ಸದೃಢ ಆರೋಗ್ಯ ಹೊಂದಿ ಸಾಧಕರಾಗಬೇಕು’ ಎಂದು ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಸಲಹೆ ನೀಡಿದರು.

ಇಲ್ಲಿನ ಶಾಸಕ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಲ್ಲಿ ರಾಜ್ಯ ವಲಯ ಕ್ರೀಡಾ ತರಬೇತಿಯಲ್ಲಿ ಪಾಲ್ಗೊಂಡ 50 ಕ್ರೀಡಾಪಟುಗಳಿಗೆ ಹಾಗೂ ಗೋಕಾಕ ಮತಕ್ಷೇತ್ರದ 22 ಸರ್ಕಾರಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳ ಕಿಟ್‌ಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು.

‘ಸರ್ಕಾರವು ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುತ್ತಿದ್ದು, ಸದ್ಬಳಕೆ ಮಾಡಿಕೊಳ್ಳಬೇಕು. ಉಜ್ವಲ ಭವಿಷ್ಯ ರೂಪಿಸಿಕೊಂಡು ತಾಲ್ಲೂಕಿಗೆ ಕೀರ್ತಿ ತರಬೇಕು’ ಎಂದರು.

ADVERTISEMENT

ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಸದಸ್ಯ ಅಬ್ಬಾಸ ದೇಸಾಯಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮಣ್ಣವರ, ಮುಖಂಡರಾದ ಮುಖಂಡರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ದುರ್ಗಪ್ಪ ಶಾಸ್ತ್ರಿ ಗೊಲ್ಲರ, ಲಕ್ಕಪ್ಪ ಮಾಳಗಿ, ಬಿಇಒ ಜಿ.ಬಿ. ಬಳಗಾರ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಠಾನ ಅಧಿಕಾರಿ ಎಂ.ಪಿ. ಮರನೂರ, ಸಿಬ್ಬಂದಿ ಎಸ್.ಡಿ. ನಗಾರಿ, ದೈಹಿಕ ಪರಿವೀಕ್ಷಕ ಎಲ್.ಕೆ. ತೋರಣಗಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.