ADVERTISEMENT

ತಿಂಗಳಾಂತ್ಯದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 17:06 IST
Last Updated 13 ಸೆಪ್ಟೆಂಬರ್ 2022, 17:06 IST
ಬೆಳಗಾವಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಬಸವರಾಜ ನಾಲತವಾಡ ಕರಪತ್ರ ಮಾಹಿತಿ ಪತ್ರ ಬಿಡುಗಡೆ ಮಾಡಿದರು
ಬೆಳಗಾವಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟಗಳ ಪೂರ್ವಭಾವಿ ಸಭೆಯಲ್ಲಿ ಬಸವರಾಜ ನಾಲತವಾಡ ಕರಪತ್ರ ಮಾಹಿತಿ ಪತ್ರ ಬಿಡುಗಡೆ ಮಾಡಿದರು   

ಬೆಳಗಾವಿ: ಈ ಬಾರಿಯ ಜಿಲ್ಲಾಮಟ್ಟದ ಕ್ರೀಡಾಕೂಟಗಳ ಗುಂಪು ಕ್ರೀಡೆ ಹಾಗೂ ಆಟೋಟಗಳನ್ನು ಸೆ.30ರೊಳಗಾಗಿ ಮುಗಿಸಬೇಕು ಎಂದು ಕ್ರೀಡಾ ಹಾಗೂ ಯುವ ಸಬಲೀಕರಣ ಇಲಾಖೆ ಉಪನಿರ್ದೇಶಕ ಬಸವರಾಜ ನಾಲತವಾಡ ತಿಳಿಸಿದರು.

ಈ ಸಂಬಂಧ ನಗರದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯಾವ ಯಾವ ತಾಲ್ಲೂಕಿನಲ್ಲಿ ಗುಂಪು ಆಟಗಳನ್ನು ಆಯೋಜಿಸಬೇಕು ಎಂದು ಈಗಲೇ ನಿರ್ಧರಿಸಬೇಕು. ಎಲ್ಲ ಕ್ರೀಡೆಗಳನ್ನೂ ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಡಿ.ಎಸ್.ಡಿಗ್ರಜ್, ಇತರ ಅಧಿಕಾರಿಗಳು, ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಇದ್ದರು.

ADVERTISEMENT

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಡಿ.ಕಾಲವಾಡ. ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಎಸ್.ಎಂ. ಕರಿಕಟ್ಟಿ, ರಾಜ್ಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘಜಿಲ್ಲಾ ಘಟಕದ ಅಧ್ಯಕ್ಷ ಡಿ.ಎನ್‌.ಹಲಕಿ, ರಾಜ್ಯ ಪದಾಧಿಕಾರಿಮಲ್ಲಾಪೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.