ಬೆಳಗಾವಿ: ‘ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರವು ಕೈಗೊಂಡ ಕ್ರಮವು ಸ್ವಾಗತಾರ್ಹವಾಗಿದೆ’ ಎಂದು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿತರಿಸಲೆಂದು ಸಂಸ್ಥೆಯಿಂದ 10ಸಾವಿರ ಮಾಸ್ಕ್ಗಳನ್ನು ಡಿಡಿಪಿಐ ಡಾ.ಆನಂದ ಬಿ. ಪುಂಡಲೀಕ ಅವರಿಗೆ ಮಂಗಳವಾರ ಹಸ್ತಾಂತರಿಸಿ ಅವರು ಮಾತನಾಡಿದರು.
‘ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಈಗಾಗಲೇ ಎಲ್ಲ ರೀತಿಯ ಪೂರ್ವ ಸಿದ್ಧತೆ ಮಾಡಿಕೊಂಡಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಯ–ಆತಂಕ ತೊರೆದು ಎರಡು ದಿನಗಳ ಪರೀಕ್ಷೆಯನ್ನು ಎದುರಿಸಬೇಕು. ಓದಿನತ್ತ ಹೆಚ್ಚಿನ ಗಮನಹರಿಸಬೇಕು. ಅವರ ಆರೋಗ್ಯದ ಹಿತದೃಷ್ಟಿಯಿಂದ ಸಂಸ್ಥೆಯಿಂದ ಮಾಸ್ಕ್ಗಳನ್ನು ನೀಡಲಾಗಿದೆ’ ಎಂದರು.
ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಜಿ. ದೇಸಾಯಿ, ಆಜೀವ ಸದಸ್ಯ ಮಹಾದೇವ ಬಳಿಗಾರ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.