ADVERTISEMENT

ರಾಜ್ಯ ಬಜೆಟ್‌: ಕೃಷಿ ರಂಗಕ್ಕೆ ಶೇ 60ರಷ್ಟು ಹಣ ಮೀಸಲಿಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2024, 15:20 IST
Last Updated 6 ಫೆಬ್ರುವರಿ 2024, 15:20 IST
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರತೀಯ ಕೃಷಿಕ ಸಮಾಜದ(ಸಂಯುಕ್ತ ರೈತ ಸಂಘಟನೆ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾರತೀಯ ಕೃಷಿಕ ಸಮಾಜದ(ಸಂಯುಕ್ತ ರೈತ ಸಂಘಟನೆ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ರಾಜ್ಯ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಕೃಷಿ ರಂಗಕ್ಕೆ ಶೇ 60ರಷ್ಟು ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ(ಸಂಯುಕ್ತ ರೈತ ಸಂಘಟನೆ) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರೈತರ ಋಣ ಪರಿಹಾರ ಆಯೋಗ ರಚಿಸಬೇಕು. ಬರದಿಂದ ಕಂಗೆಟ್ಟಿರುವ ರೈತರು ಸಹಕಾರ ಬ್ಯಾಂಕ್‌ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದಿರುವ ಸಾಲಮನ್ನಾ ಮಾಡಬೇಕು. ಬರದಿಂದ ತತ್ತರಿಸಿದ ರೈತರಿಗೆ ವೈಜ್ಞಾನಿಕವಾಗಿ ಬೆಳೆಹಾನಿ ಪರಿಹಾರ ಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.

ಸಿದಗೌಡ ಮೋದಗಿ, ಶಿವಲೀಲಾ ಮಿಸಾಳೆ, ಗೀತಾ ಧರೆಣ್ಣವರ, ಶಿವಬಸಪ್ಪ ದಿನ್ನಿಮನಿ, ತುಕಾರಾಮ ಉಪ್ಪಾರ, ಚನ್ನಪ್ಪ ಬೆಣ್ಣಿ, ಸಂಜು ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಪರಶುರಾಮ ಸಂಗನ್ನವರ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.