ADVERTISEMENT

ಹಾಸ್ಟೆಲ್‌ ಮೇಲೆ ಕಲ್ಲು ತೂರಾಟ: ಐವರ ಬಂಧನ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 14:43 IST
Last Updated 26 ಫೆಬ್ರುವರಿ 2020, 14:43 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ಇಲ್ಲಿನ ಸಂಗಮೇಶ್ವರ ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ ಮೆಟ್ರಿಕ್‌ ನಂತರ ವಿದ್ಯಾರ್ಥಿಗಳ ಹಾಸ್ಟೆಲ್‌ ಮೇಲೆ ಭಾನುವಾರ ರಾತ್ರಿ ಕಲ್ಲು ತೂರಾಟ ನಡೆಸಿದ್ದ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಎಪಿಎಂಸಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸದಾಶಿವ ನಗರ ಗಣೇಶ ಚೌಕದ ಮದನ ಅಲಿಯಾಸ್ ಮೋಹಿತ ಹುಂದ್ರೆ (27), ಅಂಕುಶ ಹುಂದ್ರೆ (19), ಪ್ರಸಾದ ಜಾಂಬಳೆ (20), ಪ್ರಥಮೇಶ ವರ್ಪೆ (21) ಹಾಗೂ ಸದಾಶಿವನಗರ ಬೆಲ್ದಾರ ಚಾವಣಿಯ ಅಜಯ ಪವಾರ (22) ಬಂಧಿತರು. ಹಾಸ್ಟೆಲ್‌ನಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT