ADVERTISEMENT

ಗಂಜಿ ಕೇಂದ್ರದಲ್ಲಿದ್ದ ಶಿಕ್ಷಕಗೆ ಪಾರ್ಶ್ವವಾಯು

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2019, 14:53 IST
Last Updated 7 ಆಗಸ್ಟ್ 2019, 14:53 IST

ಚಿಕ್ಕೋಡಿ: ತಾಲ್ಲೂಕಿನ ಅಂಕಲಿಯಲ್ಲಿ ಸಂತ್ರಸ್ತರಿಗೆ ಆರಂಭಿಸಿರುವ ಗಂಜಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಜಿನಪ್ಪ ಕಾಂಬಳೆ (40) ಪಾರ್ಶ್ವವಾಯುಪೀಡಿತರಾದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.

ಕೂಡಲೇ ಅವರನ್ನು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿ‍ಪ್ಪಾಣಿ ತಾಲ್ಲೂಕಿನ ಗಳತಗಾ ಗ್ರಾಮದಲ್ಲಿ ಪ್ರವಾಹ ಸಿಲುಕಿದ್ದ ಜಾನುವಾರನ್ನು ಅಗ್ನಿಶಾಮಕ ಸಿಬ್ಬಂದಿ ಸುಮಾರು 2 ಕಿ.ಮೀ.ನಷ್ಟು ಈಜಿಕೊಂಡು ಹೋಗಿ ರಕ್ಷಿಸಿದರು. ಜಕ್ಕಪ್ಪ, ರವಿಪೂಜಾರಿ, ವಿಜಯಕುಮಾರ್‌ ಮೊದಲಾದವರು ಎಮ್ಮೆಯನ್ನು ರಕ್ಷಿಸಿ, ಸ್ಥಳೀಯರ ಮೆಚ್ಚುಗೆಗೆ ಪಾತ್ರವಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.