ADVERTISEMENT

ಸಂವಹನ ಕೌಶಲ ಬೆಳೆಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2019, 13:38 IST
Last Updated 15 ಸೆಪ್ಟೆಂಬರ್ 2019, 13:38 IST
ಬೆಳಗಾವಿಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಒಕ್ಕೂಟ ಮತ್ತು ಕ್ರೀಡಾ ವಿಭಾಗದ ಉದ್ಘಾಟನೆಯನ್ನು ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಆರ್. ರವಿಶಂಕರ್ ಶನಿವಾರ ಉದ್ಘಾಟಿಸಿದರು
ಬೆಳಗಾವಿಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನ ಒಕ್ಕೂಟ ಮತ್ತು ಕ್ರೀಡಾ ವಿಭಾಗದ ಉದ್ಘಾಟನೆಯನ್ನು ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಆರ್. ರವಿಶಂಕರ್ ಶನಿವಾರ ಉದ್ಘಾಟಿಸಿದರು   

ಬೆಳಗಾವಿ: ‘ವಿದ್ಯಾರ್ಥಿಗಳು ಸಂವಹನ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಆರ್. ರವಿಶಂಕರ್ ಸಲಹೆ ನೀಡಿದರು.

ಇಲ್ಲಿನ ಕೆಎಲ್‌ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ಒಕ್ಕೂಟ ಮತ್ತು ಕ್ರೀಡಾ ವಿಭಾಗದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ವಿಕಸನ ಸಾಧ್ಯವಾಗುತ್ತದೆ. ವಿವಿಧ ರೀತಿಯ ಪ್ರಗತಿಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡು ಕಾನೂನು ವೃತ್ತಿಗೆ ಸಂಬಂಧಿಸಿದ ಕೌಶಲ, ಸಂವಹನ ಕಲೆ, ದಕ್ಷತೆ, ನಾಯಕತ್ವದ ಕಲೆಗಳನ್ನು ಕರಗತ ಮಾಡಿಕೊಳ್ಳಬೇಕು. ಪವಿತ್ರ ವಕೀಲಿ ವೃತ್ತಿಯಲ್ಲಿ ಯಶಸ್ಸು ಗಳಿಸಬೇಕಾದರೆ ಪರಿಮಿತ ವಲಯದಿಂದ ಹೊರಬಂದು, ಸಾಮಾಜಿಕ ಬೆಳವಣಿಗೆಯ ಅವಿಭಾಜ್ಯ ಅಂಗವಾಗಬೇಕು’ ಎಂದು ತಿಳಿಸಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ನಿರ್ದೇಶಕ ಆರ್.ಬಿ. ಬೆಲ್ಲದ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿಗಳಿಗೆ ಪ್ರಮಾಣವಚನ ಬೋಧಿಸಿದರು.

ಸುನಂದಾ ಮತ್ತು ತಂಡದವರು ಹಾಡಿದರು. ಪ್ರಾಚಾರ್ಯ ಡಾ.ಬಿ. ಜಯಸಿಂಹ ಸ್ವಾಗತಿಸಿದರು. ಮಾಣಿಕಾ ನೇಸರಕರ್ ನಿರೂಪಿಸಿದರು. ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಭಿಷೇಕ ಹಪ್ಪಳಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.