ADVERTISEMENT

ಮಧುಮೇಹ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ

​ಪ್ರಜಾವಾಣಿ ವಾರ್ತೆ
Published 11 ಮೇ 2019, 12:52 IST
Last Updated 11 ಮೇ 2019, 12:52 IST

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಮಧುಮೇಹ ಕೇಂದ್ರವು ವಿಶ್ವ ತಾಯಿಂದಿರ ದಿನಚರಣೆ ಅಂಗವಾಗಿ ಮೇ 15ರಂದು ಬೆಳಿಗ್ಗೆ 8.30ರಿಂದ ಸಂಜೆ 4.30ರವರೆಗೆ ಮಧುಮೇಹ ಮಕ್ಕಳಿಗೆ 19ನೇ ವಾರ್ಷಿಕ ಉಚಿತ ಬೇಸಿಗೆ ಶಿಬಿರ ಆಯೋಜಿಸಿದೆ.

ಕೇಂದ್ರದ ಡಾ.ಸುಜಾತಾ ಜಾಲಿ ನೇತೃತ್ವದ ತಂಡ ನಡೆಸಿಕೊಡಲಿದೆ. ರಕ್ತ, ಮಸ್ಕಲರ ಸ್ಕೆಲ್‌ಟಲ್ ತಪಾಸಣೆ, ಆಟ, ಚಿತ್ರಕಲೆ, ಪೇಂಟಿಂಗ್‌ ಸ್ಪರ್ಧೆ ಹಾಗೂ ಪ್ರೇರಣಾದಾಯಕ ಕಾರ್ಯಚಟುವಟಿಕೆಗಳನ್ನು ನಡೆಸಲಾಗುವುದು. ಅತ್ಯುತ್ತಮ ಎನಿಸಿಕೊಂಡ ಬಾಲಕಿ ಮತ್ತು ಬಾಲಕನಿಗೆ ಹಾಗೂ ಒಬ್ಬ ತಾಯಿಗೆ ಪದಕ ನೀಡಿ ಗೌರವಿಸಲಾಗುವುದು.

ಮಧುಮೇಹ ಟೈಪ್-1ರಿಂದ ಬಳಲುತ್ತಿರುವ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಅಸ್ಟ್ರೇಲಿಯಾದ ಅಂತರರಾಷ್ಟ್ರೀಯ ಮಧುಮೇಹ ಪ್ರತಿಷ್ಠಾನದ ಸಹಕಾರದಿಂದ ಇನ್ಸುಲಿನ್, ಗ್ಲುಕೊಮೀಟರ್‌ ಸೇರಿದಂತೆ ವಿವಿಧ ವೈದ್ಯಕೀಯ ಸಲಕರಣೆ, ರಾಷ್ಟ್ರೀಯ ಮಧುಮೇಹ ಪ್ರತಿಷ್ಠಾನದಿಂದ ವಿದ್ಯಾರ್ಥಿವೇತನ ನೀಡಲಾಗುವುದು. 260 ಮಕ್ಕಳು ಭಾಗವಹಿಸಲಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ: 9844073591 ಸಂ‍ಪರ್ಕಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.