ಬೆಳಗಾವಿ: 'ತೌಕ್ತೆ' ಚಂಡಮಾರುತದ ಪರಿಣಾಮ ನಗರದಲ್ಲಿ ಭಾನುವಾರ ನಸುಕಿನಿಂದಲೂ ಜೋರು ಗಾಳಿಯೊಂದಿಗೆ ಮಳೆಯಾಗುತ್ತಿದೆ.
ಶನಿವಾರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಆಗಾಗ ಮಳೆಯಾಗಿತ್ತು. ಗಾಳಿಯ ಅಬ್ಬರವೂ ಜೋರಾಗಿತ್ತು. ಈ ವಾತಾವರಣ ನಗರದಲ್ಲಿ ಭಾನುವಾರವೂ ಮುಂದುವರಿದಿದೆ.
ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಈ ಸಮಯದಲ್ಲಿ ರಸ್ತೆಬದಿ ವ್ಯಾಪಾರಿಗಳು ಒಂದಷ್ಟು ವ್ಯಾಪಾರ ಮಾಡಿಕೊಳ್ಳುತ್ತಿದ್ದರು ಮತ್ತು ಗ್ರಾಹಕರು ತರಕಾರಿ, ಹಾಲು, ಹಣ್ಣು, ಮಾಂಸ ಮೊದಲಾದವುಗಳನ್ನು ತಂದುಕೊಳ್ಳುತ್ತಿದ್ದರು. ಮಳೆಯಿಂದಾಗಿ ಅವರು ತೊಂದರೆ ಅನುಭವಿಸಿದರು. ವಾಯುವಿಹಾರಕ್ಕೆ ಹೋಗುವವರಲ್ಲಿ ಬಹುತೇಕರು ಮನೆಯಲ್ಲೇ ಉಳಿದರು.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ದಿನದ ಬಹುತೇಕ ಸಮಯ ಜೋರು ಗಾಳಿ ಮುಂದುವರಿಯಲಿದೆ ಹಾಗೂ ಆಗಾಗ ಮಳೆಯಾಗುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.