ADVERTISEMENT

ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 10:18 IST
Last Updated 7 ಸೆಪ್ಟೆಂಬರ್ 2022, 10:18 IST
   

ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು' ಎಂದರು.

'ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು.

ADVERTISEMENT

‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮವನ್ನು ಸೆ.11ಕ್ಕೆ ಮುಂದೂಡಲಾಗಿದೆ’ ಎಂದರು.

ನಂತರ ಅವರು ಉಮೇಶ ಕತ್ತಿ ಅವರ ಅಂತ್ಯಕ್ರಿಯೆ ನಡೆಯಲಿರುವ ಬೆಲ್ಲದ ಬಾಗೇವಾಡಿಗೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.