ADVERTISEMENT

ಬೈಲಹೊಂಗಲ | ಒಂದೇ ಕುಟುಂಬದ ಮೂವರ ಕೊಲೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 5:46 IST
Last Updated 19 ಜನವರಿ 2020, 5:46 IST
   

ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ದೊಡವಾಡ ಗ್ರಾಮದಲ್ಲಿ ಪತಿ, ಪತ್ನಿ ಹಾಗೂ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಪತ್ನಿ ಶಾಂತವ್ವ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದವರು.

ಶನಿವಾರ ತಡರಾತ್ರಿ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ದೊಡ್ಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ‌ಗ್ರಾಮ ಬೆಚ್ಚಿಬಿದ್ದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT