ADVERTISEMENT

ಸಹೋದರನ ಪುತ್ರ ಹರ್ಷಿತ್ ಜನ್ಮ ದಿನ: ಹುಲಿ ದತ್ತು ಪಡೆದ ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 8:28 IST
Last Updated 14 ಜೂನ್ 2021, 8:28 IST
ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿಯ ಭೂತರಾಮನಹಟ್ಟಿ ಮೃಗಾಲಯದಲ್ಲಿ ‘ಶೌರ್ಯ’ ಎನ್ನುವ ಹುಲಿ ದತ್ತು ಪಡೆದರು
ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಬೆಳಗಾವಿಯ ಭೂತರಾಮನಹಟ್ಟಿ ಮೃಗಾಲಯದಲ್ಲಿ ‘ಶೌರ್ಯ’ ಎನ್ನುವ ಹುಲಿ ದತ್ತು ಪಡೆದರು   

ಬೆಳಗಾವಿ: ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮ ದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚನ್ನಮ್ಮ ಮೃಗಾಲಯದಲ್ಲಿ ‘ಶೌರ್ಯ’ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.

‘ಆರಂಭಿಕವಾಗಿ ₹ 1 ಲಕ್ಷ ಚೆಕ್ ಅನ್ನು ಅರಣ್ಯಾಧಿಕಾರಿಗೆ ಹಸ್ತಾಂತರಿಸಿದ್ದೇನೆ. ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿದ್ದೇನೆ. ಲಾಕ್‌ಡೌನ್ ಕಾರಣದಿಂದಾಗಿ ಪ್ರಾಣಿಸಂಗ್ರಹಾಲಯಗಳಿಗೆ ಸಂದರ್ಶಕರ ಸಂಖ್ಯೆ ಕಡಿಮೆಯಾಗಿದೆ. ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಲಿ ದತ್ತು ಸ್ವೀಕರಿಸಿದ್ದೇನೆ’ ಎಂದು ಹೇಳಿದರು.

‘ಸಾರ್ವಜನಿಕರು ಪ್ರಾಣಿಗಳ ದತ್ತು ಪಡೆಯಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಮುಖಂಡ ಚನ್ನರಾಜ ಹಟ್ಟಿಹೊಳಿ, ಡಿಎಫ್‌ಒ ಅಮರನಾಥ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.