ADVERTISEMENT

ಕಚೇರಿ ಸ್ಥಳಾಂತರ ಆದೇಶ ರದ್ದು

​ಪ್ರಜಾವಾಣಿ ವಾರ್ತೆ
Published 21 ಮೇ 2020, 11:10 IST
Last Updated 21 ಮೇ 2020, 11:10 IST

ಬೆಳಗಾವಿ: ಇಲ್ಲಿದ್ದ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಹುದ್ದೆಯನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಮತ್ತುದಕ್ಷಿಣ ಕನ್ನಡ ಜಿಲ್ಲೆಯಲ್ಲಿದ್ದ ಸಹಾಯಕ ನಿರ್ದೇಶಕರ ಹುದ್ದೆಯನ್ನು ಇಲ್ಲಿಗೆ ಸ್ಥಳಾಂತರಿಸುವ ಆದೇಶವನ್ನು ರದ್ದುಪಡಿಸಿ ಪ್ರವಾಸೋದ್ಯಮ ಇಲಾಖೆ ಅಧೀನ ಕಾರ್ಯದರ್ಶಿ ಬಿ.ಎನ್. ಯತಿರಾಜ್‌ ಗುರುವಾರ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಕಂದಾಯ ವಿಭಾಗದಲ್ಲಿ ಪ್ರವಾಸೋದ್ಯಮಕ್ಕೆ ಬಹಳ ಅವಕಾಶ ಇರುವುದರಿಂದ ಉನ್ನತ ಮಟ್ಟದ ಅಧಿಕಾರಿ ಹುದ್ದೆ ಅವಶ್ಯವಾಗಿದೆ. ಹೀಗಾಗಿ, ಇಲ್ಲಿಯೇ ಮುಂದುವರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕಚೇರಿಯನ್ನು ದಿಢೀರ್‌ ಸ್ಥಳಾಂತರಿಸಿದ್ದ ನಿರ್ಧಾರದ ವಿರುದ್ಧ ಇಲ್ಲಿನ ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರು ಮೇ 15ರಂದೇ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿ ವಿಷಯದ ಕುರಿತು ಗಮನಸೆಳೆದಿದ್ದರು. ಬುಧವಾರ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರಿಗೂ ಮನವರಿಕೆ ಮಾಡಿಕೊಟ್ಟು, ಹುದ್ದೆ ಸ್ಥಳಾಂತರ ಆದೇಶ ರದ್ದುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.