ADVERTISEMENT

ಬೆಳಗಾವಿ | ಪ್ರವಾಸಿ ತಾಣ: ನಿರ್ಬಂಧ ತೆರವು

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 15:43 IST
Last Updated 27 ಸೆಪ್ಟೆಂಬರ್ 2021, 15:43 IST

ಬೆಳಗಾವಿ: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು (ಶನಿವಾರ ಮತ್ತು ಭಾನುವಾರ ನಿರ್ಬಂಧಿಸಲಾಗಿತ್ತು) ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಕೋವಿಡ್ ಕಾರಣದಿಂದ ನಿರ್ಬಂಧ ವಿಧಿಸಲಾಗಿತ್ತು.

‘ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದಲ್ಲಿ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಸೂಚನೆ: ‘ಜಿಲ್ಲೆಯಾದ್ಯಂತ ಒಂದೇ ಸಮಯದಲ್ಲಿ ಸಾರ್ವಜನಿಕರ ಒಗ್ಗೂಡುವಿಕೆಯನ್ನು ಗರಿಷ್ಠ 400 ಜನರ ಪಾಲ್ಗೊಳ್ಳುವಿಕೆಗೆ ಸೀಮಿತಗೊಳಿಸಿ ಸರ್ಕಾರದಿಂದ ಆದೇಶಿಸಲಾಗಿದೆ. ಅದನ್ನು ಎಲ್ಲರೂ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

‘ಸಂಘ–ಸಂಸ್ಥೆಗಳು ಅಥವಾ ಸಾರ್ವಜನಿಕರು ಯಾವುದೆ ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮತಿ ಪಡೆಯಬೇಕು. ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.