ADVERTISEMENT

275 ಟ್ರ್ಯಾಕ್ಟರ್‌ಗಳ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 16:05 IST
Last Updated 14 ಆಗಸ್ಟ್ 2022, 16:05 IST
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಅರಭಾವಿ ಮಂಡಲದಿಂದ ಭಾನುವಾರ ಆಯೋಜಿಸಿದ್ದ 275 ಟ್ರ್ಯಾಕ್ಟರ್‌ ರ್‍ಯಾಲಿ ಗಮನ ಸೆಳೆಯಿತು
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಅರಭಾವಿ ಮಂಡಲದಿಂದ ಭಾನುವಾರ ಆಯೋಜಿಸಿದ್ದ 275 ಟ್ರ್ಯಾಕ್ಟರ್‌ ರ್‍ಯಾಲಿ ಗಮನ ಸೆಳೆಯಿತು   

ಗೋಕಾಕ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಅರಭಾವಿ ಮಂಡಲದಿಂದ ಭಾನುವಾರ ಆಯೋಜಿಸಿದ್ದ 275 ಟ್ರ್ಯಾಕ್ಟರ್‌ ರ್‍ಯಾಲಿ ಗಮನ ಸೆಳೆಯಿತು.

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜಿಸಿದ ಈ ರ್‍ಯಾಲಿಗೆ ಇಲ್ಲಿಯ ಎನ್‍ಎಸ್‍ಎಫ್‍ ಆವರಣದಲ್ಲಿ ಮುಖಂಡ ಸರ್ವೋತ್ತಮ ಜಾರಕಿಹೊಳಿ ಚಾಲನೆ ನೀಡಿದರು. ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ, ಗಣೇಶವಾಡಿ, ದಂಡಾಪೂರ ಕ್ರಾಸ್, ರಾಜಾಪೂರ, ತುಕ್ಕಾನಟ್ಟಿ ಮಾರ್ಗವಾಗಿ ನಾಗನೂರ ಪಟ್ಟಣದ ಮಹಾಲಿಂಗೇಶ್ವರ ಮಠದಲ್ಲಿ ಸಮಾರೋಪಗೊಂಡಿತು.

ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುಭಾಶ ಪಾಟೀಲ, ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಶಿ ಮಾಳೆದವರ, ರೈತಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ ಮೂಡಲಗಿ, ಪದಾಧಿಕಾರಿಗಳು ಹಾಗೂ ರೈತರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.