ADVERTISEMENT

ಹುಕ್ಕೇರಿ: ಟ್ರ್ಯಾಕ್ಟರ್ ಕಳ್ಳರ ಬಂಧನ

​ಪ್ರಜಾವಾಣಿ ವಾರ್ತೆ
Published 6 ಜುಲೈ 2023, 14:01 IST
Last Updated 6 ಜುಲೈ 2023, 14:01 IST
ಹುಕ್ಕೇರಿ ಠಾಣೆ ಪಿಐ ಎಂ.ಎಂ.ತಹಶೀಲ್ದಾರ್ ನೇತೃತ್ವದಲ್ಲಿ ಟ್ರ್ಯಾಕ್ಟರ್ ಎಂಜಿನ್ ಸಮೇತ  ಕಳ್ಳರನ್ನು ಬಂಧಿಸಿದ ಪೊಲೀಸರು
ಹುಕ್ಕೇರಿ ಠಾಣೆ ಪಿಐ ಎಂ.ಎಂ.ತಹಶೀಲ್ದಾರ್ ನೇತೃತ್ವದಲ್ಲಿ ಟ್ರ್ಯಾಕ್ಟರ್ ಎಂಜಿನ್ ಸಮೇತ  ಕಳ್ಳರನ್ನು ಬಂಧಿಸಿದ ಪೊಲೀಸರು   

ಹುಕ್ಕೇರಿ: ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಕಳ್ಳತನವಾಗಿದ್ದ ಟ್ರ್ಯಾಕ್ಟರ್ ಪತ್ತೆ‌ ಮಾಡುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ₹2.5 ಲಕ್ಷ ಮೌಲ್ಯದ ಮಹೀಂದ್ರಾ ಕಂಪನಿಯ ಟ್ರ್ಯಾಕ್ಟರ್ ಎಂಜಿನ್‌ ವಶಪಡಿಸಿಕೊಂಡಿದ್ದಾರೆ.

ಚಿಕ್ಕೋಡಿ ತಾಲ್ಲೂಕಿನ ಜಾಗನೂರ ಗ್ರಾಮದ ಶಿವಾನಂದ ಕರಿಕಟ್ಟಿ(22) ಮತ್ತು ಗೋಕಾಕ ತಾಲ್ಲೂಕಿನ ಫಾಮಲ್ ದಿನ್ನಿ ಗ್ರಾಮದ ಶಿವಾನಂದ ಹಣಬರಟ್ಟಿ (20) ಆರೋಪಿಗಳು.

ಇದೇ ವರ್ಷ ಏಪ್ರೀಲ್ 28ರಂದು ರಾತ್ರಿ ತಾಲ್ಲೂಕಿನ ಗೌಡವಾಡ ಗ್ರಾಮದಲ್ಲಿ ಮಹೀಂದ್ರಾ ಕಂಪನಿಯ ಟ್ರ್ಯಾಕ್ಟರ್ ಕಳ್ಳತನವಾದ ಬಗ್ಗೆ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಳಗಾವಿ ಎಸ್‌ಪಿ ಡಾ.ಸಂಜೀವ ಪಾಟೀಲ, ಹೆಚ್ಚುವರಿ ಎಸ್.ಪಿ ಎಂ.ವೇಣುಗೋಪಾಲ್, ಗೋಕಾಕ ಡಿವೈಎಸ್‌ಪಿ ದೂದಪೀರ್ ಮುಲ್ಲಾ ಅವರ ಮಾರ್ಗದರ್ಶನದಲ್ಲಿ ಹುಕ್ಕೇರಿ ಪಿಐ ಎಂ.ಎಂ.ತಹಶೀಲ್ದಾರ್ ಅವರು ಜುಲೈ 6ರಂದು ಪ್ರಕರಣ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.