ADVERTISEMENT

ವಾಸ್ಕೊ– ನಿಜಾಮುದ್ದೀನ್‌ ರೈಲಿನಲ್ಲಿ ಪ್ರಜ್ಞೆ ತಪ್ಪಿದವರಿಗೆ ಮುಂದುವರಿದ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2023, 11:22 IST
Last Updated 12 ಸೆಪ್ಟೆಂಬರ್ 2023, 11:22 IST
<div class="paragraphs"><p> ರೈಲು ಸಂಚಾರ ವ್ಯತ್ಯಯ</p></div>

ರೈಲು ಸಂಚಾರ ವ್ಯತ್ಯಯ

   

ಬೆಳಗಾವಿ: ವಾಸ್ಕೊ– ನಿಜಾಮುದ್ದೀನ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸೋಮವಾರ ಪ್ರಜ್ಞೆ ತಪ್ಪಿದ್ದ ಎಂಟು ಮಂದಿಯ ಆರೋಗ್ಯದಲ್ಲಿ ತುಸು ಸುಧಾರಣೆ ಕಂಡಿದೆ. ಆರು ಮಂದಿಗೆ ಪ್ರಜ್ಞೆ ಮರಳಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನಿಬ್ಬರು ಪ್ರಜ್ಞಾಹೀನರಾಗಿದ್ದು, ಅವರಿಗೆ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಈ ಎಂಟೂ ಜನ ಮಧ್ಯಪ್ರದೇಶದ ಖಂಡ್ವಾ ಎಂಬ ಊರಿನವರು ಎಂದು ಗೊತ್ತಾಗಿದೆ. ಎಲ್ಲರೂ ಅಂದಾಜು 25ರಿಂದ 30 ವರ್ಷ ವಯಸ್ಸಿನವರಿದ್ದು, ಗೋವಾದಲ್ಲಿ ಕಾರ್ಮಿಕರಾಗಿದ್ದರು. ಹಬ್ಬದ ಕಾರಣ ವಾಸ್ಕೊ– ನಿಜಾಮುದ್ದೀನ್‌ ರೈಲಿನ ಜನರಲ್‌ ಬೋಗಿಯಲ್ಲಿ ತಮ್ಮ ಊರಿಗೆ ಹೊರಟಿದ್ದರು.

ADVERTISEMENT

ಗೋವಾರ– ಕರ್ನಾಟಕದ ಗಡಿಗೆ ರೈಲು ಬಂದಾಗ ಅಪರಿಚಿತ ವ್ಯಕ್ತಿಗಳು ಇವರಿಗೆ ಚಾಕೊಲೇಟ್‌, ಬಿಸ್ಕತ್ತು ಹಾಗೂ ಕುರುಕುರೆ ತಿನ್ನಲು ಕೊಟ್ಟಿದ್ದರು. ಅದನ್ನು ತಿಂದ ಕೆಲವೇ ನಿಮಿಷಗಳಲ್ಲಿ ಎಂಟೂ ಜನ ಪ್ರಜ್ಞೆ ತಪ್ಪಿದರು. ಬಹಳಷ್ಟು ಸಮಯದ ಬಳಿಕವೂ ಅವರು ಎಚ್ಚರವಾಗದ್ದನ್ನು ಕಂಡ ಸಹ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು.

ರೈಲು ರಾತ್ರಿ ಬೆಳಗಾವಿಗೆ ತಲುಪಿದಾಗ ರಕ್ಷಣೆಗೆ ಮುಂದಾದ ರೈಲ್ವೆ ಪೊಲೀಸರು, ಎಂಟೂ ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಘಟನೆ ನಡೆದ 28 ತಾಸುಗಳ ಬಳಿಕ ಆರು ಮಂದಿ ಕಣ್ಣು ತೆರೆದಿದ್ದಾರೆ. ಆದರೆ, ಮಾತನಾಡುವಷ್ಟು ಚೈತನ್ಯ ಬಂದಿಲ್ಲ. ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾಗಿ ರೈಲ್ವೆ ಪಿಎಸ್‌ಐ ವೆಂಕಟೇಶ್‌ ‘‍ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಎಂಟೂ ಮಂದಿ ಚೇತರಿಸಿಕೊಂಡ ನಂತರ ಅವರಿಂದ ಮಾಹಿತಿ ಪಡೆಯಲಾಗುವುದು. ಬಳಿಕ ತನಿಖೆ ನಡೆಯಲಿದೆ. ಗೋವಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದರಿಂದ ಪ್ರಕರಣವನ್ನು ಗೋವಾ ಪೊಲೀಸರಿಗೆ ಒಪ್ಪಿಸುವ ವಿಚಾರವಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.