ಬೆಳಗಾವಿ: ಹೊರವಲಯದ ಕಣಬರ್ಗಿ ರಸ್ತೆಯ ಬಳಿ ಶುಕ್ರವಾರ ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದ ಇಬ್ಬರು ಕೂಲಿಕಾರ್ಮಿಕರು ಸಿಡಿಲು ಬಡಿದು ಮೃತಪಟ್ಟರು.
ಬೈಲಹೊಂಗಲ ತಾಲ್ಲೂಕಿನ ಹೋಗರ್ತಿಯ, ಸದ್ಯ ಗೋಕಾಕ ತಾಲ್ಲೂಕಿನ ಅಕ್ಕತಂಗೇರಹಾಳದಲ್ಲಿದ್ದ ಪ್ರಕಾಶ ಕರೆಪ್ಪ ವ್ಯಾಪಾರಗಿ (44) ಹಾಗೂ ಗೋಕಾಕ ತಾಲ್ಲೂಕಿನ ರಾಜನಕಟ್ಟೆಯ ಭರಮಪ್ಪ ಭೀಮಪ್ಪ ಬಾದರವಾಡಿ (39) ಮೃತರು.
ಇವರು ಕಣಬರ್ಗಿ ಸಮೀಪದ ಹೊಲದಲ್ಲಿ ಕೂಲಿ ಕೆಲಸಕ್ಕೆ ಬಂದಿದ್ದರು ಎಂದು ಮಾಳಮಾರುತಿ ಠಾಣೆ ಪೊಲೀಸರು ಮಾಹಿತಿ ನೀಡಿದರು.
ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.