ADVERTISEMENT

ಚುನಾವಣಾ ಕರ್ತವ್ಯಕ್ಕೆ ಗೈರು: ಇಬ್ಬರ ಅಮಾನತು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2019, 14:37 IST
Last Updated 22 ಏಪ್ರಿಲ್ 2019, 14:37 IST
   

ಬೆಳಗಾವಿ: ಲೋಕಸಭಾ ಚುನಾವಣೆ ಕರ್ತವ್ಯಕ್ಕೆ ಗೈರುಹಾಜರಾದ ಮಾಳಮಾರುತಿ ಠಾಣೆ ಕಾನ್‌ಸ್ಟೆಬಲ್‌ ಸಿ.ಎಸ್. ಭರತ ಹಾಗೂ ಉದ್ಯಮಬಾಗ್‌ ಠಾಣೆಯ ಕಾನ್‌ಸ್ಟೆಬಲ್ ರುಕ್ಮಿಣಿ ಉಪ್ಪಾರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್‌ ಆದೇಶಿಸಿದ್ದಾರೆ.

‘ಅವರು ಹಲವು ದಿನಗಳಿಂದ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರುಹಾಜರಾಗಿದ್ದರು. ಚುನಾವಣೆಯಂತಹ ಮಹತ್ವದ ಕರ್ತವ್ಯಕ್ಕೆ ಹಾಜರಾಗುವಂತೆ ಮೇಲಾಧಿಕಾರಿಗಳು ಸಾಕಷ್ಟು ಬಾರಿ ತಿಳಿಸಿದರೂ ಬಂದಿರಲಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT