ADVERTISEMENT

ಯುಪಿಎಸ್‌ಸಿ ತರಬೇತಿ; ದೆಹಲಿಯಿಂದ ವಾಪಸ್ಸಾಗಿದ್ದ ಯುವಕನಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 15:00 IST
Last Updated 2 ಜೂನ್ 2020, 15:00 IST

ಗೋಕಾಕ: ದೆಹಲಿಯಲ್ಲಿ ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಪಡೆದು ಸ್ವಗ್ರಾಮಕ್ಕೆ ವಾಪಸ್ಸಾಗಿದ್ದ ತಾಲ್ಲೂಕಿನ ಶಿಲ್ತಿಭಾವಿ ಗ್ರಾಮದ ಯುವಕನಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಇವರನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಂಕಿತ ಯುವಕ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ದೆಹಲಿಯಿಂದ ಗ್ರಾಮಕ್ಕೆ ಮರಳಿ ಬಂದಿದ್ದರು. 14 ದಿನಗಳ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಆದರೆ, ಇತ್ತೀಚೆಗೆ ರಾಜ್ಯ ಸರ್ಕಾರವು ಕ್ವಾರಂಟೈನ್‌ ಅವಧಿಯನ್ನು ಕಡಿತಗೊಳಿಸಿದ್ದರಿಂದ, ಇವರನ್ನು 12ನೇ ದಿನಕ್ಕೆ ಕ್ವಾರಂಟೈನ್‌ನಿಂದ ಬಿಡುಗಡೆಗೊಳಿಸಿ ಮನೆಗೆ ಕಳುಹಿಸಿಕೊಡಲಾಗಿತ್ತು.

ಯುವಕನಿಗೆ ಕೋವಿಡ್‌–19 ಸೋಂಕು ತಗುಲಿರುವುದು ಮಂಗಳವಾರ ಮಧ್ಯಾಹ್ನ ದೃಢಪಟ್ಟಿದೆ. ಯುವಕನ ಮನೆಯ ಎಲ್ಲ ಆರೂ ಜನರನ್ನು ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಗ್ರಾಮವನ್ನು ಸೀಲ್‌ಡೌನ್‌ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.