ADVERTISEMENT

ಶುದ್ಧ ನೀರಿನ ಘಟಕ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2021, 4:17 IST
Last Updated 25 ಜೂನ್ 2021, 4:17 IST
ಬೈಲಹೊಂಗಲ ತಾಲ್ಲೂಕಿನ ಬೆಳವಡಿ ಗ್ರಾಮದಲ್ಲಿ ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು
ಬೈಲಹೊಂಗಲ ತಾಲ್ಲೂಕಿನ ಬೆಳವಡಿ ಗ್ರಾಮದಲ್ಲಿ ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿದರು   

ಬೈಲಹೊಂಗ: ‘ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ ಕ್ಷೇತ್ರದಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ತೆರೆಯಲಾಗುತ್ತಿದೆ' ಎಂದು ಬೆಳಗಾವಿ ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಹೇಳಿದರು.

ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಡಾ.ವಿಶ್ವನಾಥ ಪಾಟೀಲ ಅಭಿಮಾನಿ ಬಳಗದಿಂದ ತೆರೆದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಬಳಗದ ಅಧ್ಯಕ್ಷ ಬಾಳನಗೌಡ ಪಾಟೀಲ ಮಾತನಾಡಿ, ವಿಶ್ವನಾಥ ಪಾಟೀಲ ಅವರ ಮಾರ್ಗದರ್ಶನದಲ್ಲಿ ಬೈಲಹೊಂಗಲದಲ್ಲಿ 7, ಯರಝರ್ವಿ, ಹೊಸೂರ, ಬೆಳವಡಿಯಲ್ಲಿ ತಲಾ 1 ಘಟಕ ಸ್ಥಾಪಿಸಲಾಗಿದೆಎಂದರು.

ADVERTISEMENT

ಜಿಲ್ಲಾ ಪಂಚಾಯ್ತಿ ಸದಸ್ಯ ವೀರಣ್ಣ ಕರೀಕಟ್ಟಿ, ಎಂ.ಎಂ.ಕಾಡೇಶನವರ, ಪ್ರಕಾಶ ಹುಂಬಿ, ರಾಯನಗೌಡ ಪಾಟೀಲ, ಪ್ರಕಾಶ ಭರಮಗೌಡರ, ಗದಗಯ್ಯ ರೊಟ್ಟಯ್ಯನವರ, ಶಂಕರ ಕರೀಖಟ್ಟಿ, ಪ್ರಸಾದ ಕಾರಿಮನಿ, ಶಿವಾನಂದ ಬಳಿಗಾರ, ಹಣಮಂತ ಕಕ್ಕಯ್ಯನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.