ಬೆಳಗಾವಿ: ‘ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿ ನಿರ್ಮಿಸಿರುವ ಕಾಂಗ್ರೆಸ್ ಸೇವಾದಳ ಕಟ್ಟಡದ ಉದ್ಘಾಟನೆ ಸಮಾರಂಭ ಮುಂದೂಡಲಾಗಿದೆ. ಅ.2ರಂದು ಅಲ್ಲಿ ಗಾಂಧಿ ಜಯಂತಿಯನ್ನು ಮಾತ್ರ ಆಚರಿಸಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.
ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಖುದ್ದು ಭೇಟಿಯಾಗಿ ಉದ್ಘಾಟನೆಗೆ ಆಹ್ವಾನಿಸಿ ಮುಂದಿನ ದಿನಾಂಕ ನಿಗದಿಪಡಿಸುತ್ತೇನೆ’ ಎಂದರು.
‘ಗಾಂಧಿ ಜಯಂತಿಯಂದು ಪಕ್ಷದ ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ ಸೇರಿ ಗಣ್ಯರು ಸೇವಾದಳ ಕಚೇರಿಗೆ ಬರುವರು. ಅದಕ್ಕೂ ಮುನ್ನ, ಬೆಳಗಾವಿ ನಗರದ ಸಂಗೊಳ್ಳಿರಾಯಣ್ಣ ವೃತ್ತದ ಬಳಿ ನಿರ್ಮಿಸಿರುವ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸುವರು. ಈ ಹಿಂದೆ ದಿನಾಂಕ ನಿಗದಿಯಾಗಿತ್ತು. ಆದರೆ, ಕೋವಿಡ್–19 ಲಾಕ್ಡೌನ್ ಕಾರಣ ಮುಂದೂಡಲಾಗಿತ್ತು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.