ADVERTISEMENT

ಕೋವಿಡ್ ಮಾರ್ಗಸೂಚಿ ಪಾಲಿಸಿ ಮತ ಎಣಿಕೆ: ಡಿ.ಸಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 10:04 IST
Last Updated 21 ಏಪ್ರಿಲ್ 2021, 10:04 IST
ಡಾ.ಕೆ. ಹರೀಶ್‌ಕುಮಾರ್‌
ಡಾ.ಕೆ. ಹರೀಶ್‌ಕುಮಾರ್‌   

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಪ್ರಕ್ರಿಯೆಯು ಈ ಹಿಂದೆ ನಿಗದಿಯಾಗಿದ್ದಂತೆಯೇ ಮೇ 2ರಂದು ನಗರದ ಆರ್‌‍ಪಿಡಿ ಕಾಲೇಜಿನಲ್ಲಿ ನಡೆಯಲಿದೆ.

ಕೋವಿಡ್ ನಿಯಂತ್ರಣಕ್ಕಾಗಿ ಮೇ 4ರವರೆಗೆ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಇರುತ್ತದೆ. ಮತ ಎಣಿಕೆಯು ಭಾನುವಾರ ಬಂದಿದೆ. ಅಂದು ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರು, ಬೆಂಬಲಿಗರು ಮೊದಲಾದವರು ಮತ ಎಣಿಕೆ ಕೇಂದ್ರದ ಬಳಿ ಸೇರುವುದು, ಗೆದ್ದವರು ವಿಜಯೋತ್ಸವ ಆಚರಿಸುವುದು, ಮೆರವಣಿಗೆ ನಡೆಸುವ ಸಾಧ್ಯತೆ ಇರುತ್ತದೆ. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

‘ಸರ್ಕಾರದ ಆದೇಶದ ಪ್ರಕಾರ ಅಂದು ಕರ್ಫ್ಯೂ ಜಾರಿಯಲ್ಲಿರುತ್ತದೆ. ಜನರು ಹೊರಗಡೆ ಅನವಶ್ಯವಾಗಿ ಓಡಾಡುವಂತಿಲ್ಲ. ಮತ ಎಣಿಕೆ ಕೇಂದ್ರದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಮತ ಎಣಿಕೆ ಕಾರ್ಯ ನಡೆಸಲಾಗುವುದು. ಕೆಂದ್ರದ ಹೊರಗಡೆ ಜನರು ಸೇರುವುದಕ್ಕೆ ಅವಕಾಶ ಇರುವುದಿಲ್ಲ. ಸೋಂಕು ನಿಯಂತ್ರಿಸುವ ಉದ್ದೇಶದಿಂದ ಮತ ಎಣಿಕೆ ಕೇಂದ್ರದಲ್ಲಿ ಹೆಚ್ಚುವರಿ ಕೊಠಡಿಗಳನ್ನು ಬಳಸಲಾಗುವುದು. ಅಗತ್ಯ ಬಿದ್ದರೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಕೆ. ಹರೀಶ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.