ADVERTISEMENT

ಗೋಡೆ ಕುಸಿದು ಮಹಿಳೆಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 9:04 IST
Last Updated 3 ಅಕ್ಟೋಬರ್ 2022, 9:04 IST

ಎಂ.ಕೆ.ಹುಬ್ಬಳ್ಳಿ (ಬೆಳಗಾವಿ ಜಿಲ್ಲೆ): ಚನ್ನಮ್ಮನ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಸೋಮವಾರ ಮನೆ ಗೋಡೆ ಕುಸಿದು ಮಹಿಳೆಯೊಬ್ಬರು ತೀವ್ರ ಗಾಯಗೊಂಡಿದ್ದಾರೆ.

ಪಟ್ಟಣದ ನಿವಾಸಿ ಕಾಳಮ್ಮ ಮಹಾರುದ್ರಪ್ಪ ಕಮ್ಮಾರ (32) ಗಾಯಗೊಂಡವರು. ಎರಡು ದಿನಗಳಿಂದ ಸುರಿದ ಮಳೆಯ ಕಾರಣ ಕಲ್ಲು– ಮಣ್ಣಿನ ಗೋಡೆ ತೋಯ್ದಿತ್ತು. ಅದರ ಪಕ್ಕದಲ್ಲೇ ಕಾಳಮ್ಮ ಅಡುಗೆ ಮಾಡುತ್ತಿದ್ದರು. ಏಕಾಏಕಿ ಅವರ ಮೇಲೆ ಕುಸಿದುಬಿತ್ತು. ಅವಶೇಷಗಳಡಿ ಸಿಲುಕಿದ್ದ ಅವರನ್ನು ರಕ್ಷಿಸಿದ ಜನ, ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‌ಇಎಸ್‌ ಆಸ್ಪತ್ರೆಗೆ ದಾಖಲಿಸಿದರು. ಅವರ ಎರಡೂ ಕಾಲುಗಳು ಮುರಿದಿವೆ, ಸೊಂಟಕ್ಕೆ ಅಪಾರ ಪೆಟ್ಟುಬಿದ್ದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಹಶೀಲ್ದಾರ್‌ ಸೋಮಲಿಂಗಪ್ಪ ಹಾಲಗಿ, ಕಂದಾಯ ನಿರೀಕ್ಷಕ ಬಡಗಾಂವಿ, ಗ್ರಾಮ ಲೆಕ್ಕಾಧಿಕಾರಿ ಬಂಡಿವಡ್ಡರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.