ADVERTISEMENT

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 8:30 IST
Last Updated 22 ಡಿಸೆಂಬರ್ 2021, 8:30 IST
ಅಗತ್ಯ ವಸ್ತುಗಳು ಹಾಗೂ ತೈಲ ದರ ಏರಿಕೆ ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದವರು ತಾಲ್ಲೂಕಿನ ಅಲಾರವಾಡ ಕ್ರಾಸ್ ಬಳಿ ಬುಧವಾರ ವಿನೂತನವಾಗಿ ಪ್ರತಿಭಟಿಸಿದರು.
ಅಗತ್ಯ ವಸ್ತುಗಳು ಹಾಗೂ ತೈಲ ದರ ಏರಿಕೆ ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದವರು ತಾಲ್ಲೂಕಿನ ಅಲಾರವಾಡ ಕ್ರಾಸ್ ಬಳಿ ಬುಧವಾರ ವಿನೂತನವಾಗಿ ಪ್ರತಿಭಟಿಸಿದರು.   

ಬೆಳಗಾವಿ: ಅಗತ್ಯ ವಸ್ತುಗಳು ಹಾಗೂ ತೈಲ ದರ ಏರಿಕೆ ಖಂಡಿಸಿ ಕೆಪಿಸಿಸಿ ಮಹಿಳಾ ಘಟಕದವರು ತಾಲ್ಲೂಕಿನ ಅಲಾರವಾಡ ಕ್ರಾಸ್ ಬಳಿ ಬುಧವಾರ ವಿನೂತನವಾಗಿ ಪ್ರತಿಭಟಿಸಿದರು.

ರಸ್ತೆಯಲ್ಲೇ ತರಕಾರಿ, ದಿನಸಿ ಸಾಮಗ್ರಿಗಳು ಹಾಗೂ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪ್ರತಿಭಟಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು‌. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಬಲ ನೀಡಿದರು.

ADVERTISEMENT

ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಈ ಕಾರ್ಯಕರ್ತೆಯರು ಉದ್ದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.