ADVERTISEMENT

‘ಮಹಿಳಾ ಸಂಗಮ’ ಕಾರ್ಯಕ್ರಮ ನಾಳೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2020, 9:24 IST
Last Updated 29 ಡಿಸೆಂಬರ್ 2020, 9:24 IST

ಬೆಳಗಾವಿ: ನಾಗನೂರು ರುದ್ರಾಕ್ಷಿಮಠದಿಂದ ಇಲ್ಲಿನ ಶಿವಬಸವನಗರದ ಎಸ್‌ಜಿಬಿಐಟಿ ಸಭಾಂಗಣದಲ್ಲಿ ಡಿ. 30ರಂದು ಸಂಜೆ 5.30ಕ್ಕೆ ಸಾಧಕಿ ಪದ್ಮಾವತಿ ಷಣ್ಮುಖಪ್ಪ ಅಂಗಡಿ ಸ್ಮರಣಾರ್ಥ ‘ಮಹಿಳಾ ಸಂಗಮ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗದಗದ ತೋಂಟದಾರ್ಯ ಸಂಸ್ಥಾನ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ರುದ್ರಾಕ್ಷಿಮಠದ ಡಾ.ಅಲ್ಲಮಪ್ರಭು ಸ್ವಾಮೀಜಿ ನೇತೃತ್ವ ವಹಿಸುವರು. ಧಾರವಾಡದ ಡಾ.ಉಜ್ವಲಾ ಎಸ್. ಹಿರೇಮಠ ಪಾಲ್ಗೊಳ್ಳುವರು. ಶರಣೆ ಗಿರಿಜಕ್ಕ ಧರ್ಮರೆಡ್ಡಿ ಮತ್ತು ಮುಖ್ಯಮಂತ್ರಿ ಚಿನ್ನದ ಪದಕ ಪಡೆದ ಅರಣ್ಯ ಅಧಿಕಾರಿ ಸುನೀತಾ ನಿಂಬರಗಿ ಅವರಿಗೆ ‘ಮಹಿಳಾ ರತ್ನ’ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT