ADVERTISEMENT

ವಿಶ್ವ ರೆಡ್ ಕ್ರಾಸ್ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2022, 15:26 IST
Last Updated 11 ಮೇ 2022, 15:26 IST
ಬೆಳಗಾವಿಯಲ್ಲಿ ಕುಟುಂಬ ಯೋಜನೆ ಸಂಘ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು ಎಫ್‌ಪಿಎಐ ಬೆಳಗಾವಿ ಅಧ್ಯಕ್ಷ ಡಾ.ವಿ.ಸಿ. ಬಾವಡೆಕರ ಉದ್ಘಾಟಿಸಿದರು
ಬೆಳಗಾವಿಯಲ್ಲಿ ಕುಟುಂಬ ಯೋಜನೆ ಸಂಘ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವನ್ನು ಎಫ್‌ಪಿಎಐ ಬೆಳಗಾವಿ ಅಧ್ಯಕ್ಷ ಡಾ.ವಿ.ಸಿ. ಬಾವಡೆಕರ ಉದ್ಘಾಟಿಸಿದರು   

ಬೆಳಗಾವಿ: ಇಲ್ಲಿನ ಕುಟುಂಬ ಯೋಜನೆ ಸಂಘ ಹಾಗೂ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ (ಸಿಟಿಇ) ಸಹಯೋಗದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಭಾರತೀಯ ಕುಟುಂಬ ಕಲ್ಯಾಣ ಸಂಘ (ಎಫ್‌ಪಿಎಐ) ಬೆಳಗಾವಿ ಅಧ್ಯಕ್ಷ ಡಾ.ವಿ.ಸಿ. ಬಾವಡೆಕರ ಉದ್ಘಾಟಿಸಿದರು.

ಮುಖ್ಯಅತಿಥಿಯಾಗಿದ್ದ ಬೆಂಗಳೂರಿನ ಐಆರ್‌ಸಿಎಸ್‌ನ ವ್ಯವಸ್ಥಾಪನ ಸಮಿತಿ ರಾಜ್ಯಾಧ್ಯಕ್ಷ ಡಾ.ಎಸ್.ಬಿ. ಕುಲಕರ್ಣಿ, ‘ಮಾನವೀಯತೆಯಿಂದ ಶಾಂತಿಯ ಕಡೆಗೆ ಎನ್ನುವುದುರೆಡ್‌ಕ್ರಾಸ್ ಸಂಸ್ಥೆಯ ಈ ವರ್ಷದ ಘೋಷವಾಕ್ಯವಾಗಿದೆ. ಆ ತತ್ವವನ್ನು ಎಲ್ಲರೂ ಪಾಲಿಸಬೇಕು’ ಎಂದು ತಿಳಿಸಿದರು.

ADVERTISEMENT

ಕಾಲೇಜಿನ ಪ್ರಾಚಾರ್ಯ ರಾಜೀವ ವಿ.ನಾಯಕ ಅಧ್ಯಕ್ಷತೆ ವಹಿಸಿದ್ದರು. ಪ್ರವೀಣ ಮರೆಣ್ಣವರ ಪ್ರಾರ್ಥಿಸಿದರು. ಆರ್.ಎಸ್. ಬಡಿಗೇರ ಸ್ವಾಗತಿಸಿದರು. ಬಿ.ಡಿ. ಕಾರದಗೆ ಪರಿಚಯಿಸಿದರು. ಕೃಷ್ಣ ಗುಮಾಸ್ತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶರಣಪ್ಪ ದಿನ್ನಿ ನಿರೂಪಿಸಿದರು. ಕೀರ್ತಿ ಕಡೊಳ್ಳಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.