ADVERTISEMENT

ಗ್ರಾಮಸ್ಥರಿಂದ ಹಲ್ಲೆ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2022, 21:29 IST
Last Updated 23 ಆಗಸ್ಟ್ 2022, 21:29 IST

ಬೆಳಗಾವಿ: ತಾಲ್ಲೂಕಿನ ಬಸವನಕುಡಚಿ ಗ್ರಾಮದಲ್ಲಿ ಈಚೆಗೆ ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿದ್ದ ವ್ಯಕ್ತಿ ಮಂಗಳವಾರ ರಾತ್ರಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಬಸವನ ಕುಡಚಿಯ ವಿಶಾಲ ಅಲಿಯಾಸ್ ಕೋಮಲ್ ಕಲ್ಲಪ್ಪ ಪಟಾಯಿ (28) ಮೃತಪಟ್ಟವರು.

"ಮಾನಸಿಕ ಅಸ್ವಸ್ಥ ಆಗಿದ್ದ ಈ ವ್ಯಕ್ತಿ ಊರಿನಲ್ಲಿ ಜನರಿಗೆ ತೊಂದರೆ ನೀಡುತ್ತಿದ್ದ. ವಾರದ ಹಿಂದೆ ಶಿಕ್ಷಕರಿಗೆ ಕಲ್ಲೆಸೆದು ಗಾಯಗೊಳಿಸಿದ್ದ. ಇದರಿಂದ ಕೋಪಗೊಂಡ ಜನ ಮರಕ್ಕೆ ಕಟ್ಟಿ ಹೊಡೆದಿದ್ದರು. ಬಳಿಕ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ನಾಲ್ಕು ದಿನದ ನಂತರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ನಗರದ ಮಾಳಮಾರುತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.