ADVERTISEMENT

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 11:15 IST
Last Updated 8 ಜೂನ್ 2020, 11:15 IST
ತೆಲಸಂಗದ ಅಂಬೇಡ್ಕರ್ ವೃತ್ತದಿಂದ ಜೇವರ್ಗಿ–ಸಂಕೇಶ್ವರ ರಾಜ್ಯ ಹೆದ್ದಾರಿ ಸೇರುವ 4 ಕಿ.ಮೀ. ರಸ್ತೆ ದುರಸ್ತಿಗೆ ಆಗ್ರಹಿಸಿ ಸೋಮವಾರ ಗ್ರಾಮದ ಯುವಕರು ಪ್ರತಿಭಟನೆ ನಡೆಸಿದರು
ತೆಲಸಂಗದ ಅಂಬೇಡ್ಕರ್ ವೃತ್ತದಿಂದ ಜೇವರ್ಗಿ–ಸಂಕೇಶ್ವರ ರಾಜ್ಯ ಹೆದ್ದಾರಿ ಸೇರುವ 4 ಕಿ.ಮೀ. ರಸ್ತೆ ದುರಸ್ತಿಗೆ ಆಗ್ರಹಿಸಿ ಸೋಮವಾರ ಗ್ರಾಮದ ಯುವಕರು ಪ್ರತಿಭಟನೆ ನಡೆಸಿದರು   

ತೆಲಸಂಗ(ಬೆಳಗಾವಿ): ‘ಇಲ್ಲಿಂದ ವಿಜಯಪುರಕ್ಕೆ ಸಂಪರ್ಕ ಕಲ್ಪಿಸುವ ಜೇವರ್ಗಿ–ಸಂಕೇಶ್ವರ ರಾಜ್ಯ ಹೆದ್ದಾರಿಗೆ ಸೇರುವ 4 ಕಿ.ಮೀ. ರಸ್ತೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಕೆಲವು ಯುವಕರು ಉರುಳು ಸೇವೆ ಮಾಡಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಗ್ರಾಮದಿಂದ 42 ಕಿ.ಮೀ. ದೂರದಲ್ಲಿರುವ ವಿಜಯಪುರ ಜಿಲ್ಲೆಗೆ ತೆಲಸಂಗ ಹೋಬಳಿಯ ಜನರು ನಿತ್ಯವೂ ಓಡಾಡುತ್ತಿರುತ್ತಾರೆ. ಸಾರಿಗೆ ಸಂಸ್ಥೆಯ ಹತ್ತಾರು ಬಸ್‌ಗಳು ಮಾತ್ರವಲ್ಲದೆ ದ್ವಿಚಕ್ರವಾಹನ, ಕಾರು, ಟೆಂಪೊ ಮೊದಲಾದವು ಸೇರಿ ನೂರಾರು ವಾಹನಗಳ ಸಂಚಾರ ಸಾಮಾನ್ಯವಾಗಿರುತ್ತದೆ. ಆದರೆ, ರಸ್ತೆ ಸದ್ಯ ಹಾಳಾಗಿರುವುದರಿಂದ ಸಂಚಾರ ದುಸ್ತರವಾಗಿದೆ. ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆತಿಲ್ಲ’ ಎಂದು ದೂರಿದರು.

ಸಲೀಮ ಮುಜಾವರ, ಮುನ್ನಾ ಕರಜಗಿ, ಇರ್ಫಾನ್ ಮುಜಾವರ, ಆಶೀಫ್ ಮುಜಾವರ ಪಾಲ್ಗೊಂಡಿದ್ದರು.

ADVERTISEMENT

‘ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಎಇಇ ಗೌಡಪ್ಪ ಗೂಳಪ್ಪ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.