ಬೆಳಗಾವಿ: ನಗರದಲ್ಲಿ ಜೂನ್ 1ರಿಂದ ಜಿಮ್ಗಳ ಪುನರಾರಂಭಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಜಿಮ್ ಮಾಲೀಕರ ಸಂಘದವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
‘ಲಾಕ್ಡೌನ್ ಕಾರಣದಿಂದ ಮಾರ್ಚ್ 23ರಿಂದ ಇಲ್ಲಿವರೆಗೆ ಜಿಮ್ಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಮಾಲೀಕರು ನಷ್ಟ ಅನುಭವಿಸಿದ್ದಾರೆ. ಹೀಗಾಗಿ, ಅನುಕೂಲ ಮಾಡಿಕೊಡಬೇಕು’ ಎಂದು ಕೋರಿದರು.
ಬಿಜೆಪಿ ಮುಖಂಡ ಕಿರಣ ಜಾಧವ, ಸಂಘದ ಅಧ್ಯಕ್ಷ ಕಿರಣ ಕವಳೆ, ಉಪಾಧ್ಯಕ್ಷ ಚೇತನ, ಕಾರ್ಯದರ್ಶಿ ಮಹೇಶ್ ಮೋರೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.