ADVERTISEMENT

ಅಂಗವಿಕಲರಿಗೆ ವೈದ್ಯಕೀಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2012, 19:30 IST
Last Updated 25 ಏಪ್ರಿಲ್ 2012, 19:30 IST

ಬೆಂಗಳೂರು: ಕರ್ನಾಟಕ ಸಾಂಸ್ಕೃತಿಕ ವೇದಿಕೆಯು ಅಂಗವಿಕಲರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ ಏಪ್ರಿಲ್ 28 ರಂದು ಬೆಳಿಗ್ಗೆ 9 ಗಂಟೆಗೆ ವಿಜಯನಗರದಲ್ಲಿರುವ ನಚಿಕೇತ ಮನೋವಿಕಾಸ ಕೇಂದ್ರದಲ್ಲಿ ಅಂಗವಿಕಲರ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅಂಗವಿಕಲರು ಈ ಶಿಬಿರದ ಪ್ರಯೋಜನವನ್ನು ಪಡೆಯಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ- ಪ್ರಸಾದ್ ಕಡೇಶ್ವಾಲ್ಯ, ಮುಖ್ಯಸ್ಥರು, ಕರ್ನಾಟಕ ಸಾಂಸ್ಕೃತಿಕ ವೇದಿಕೆ. ಮೊಬೈಲ್: 77605 33950.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.