ADVERTISEMENT

ಅಕ್ರಮವಾಗಿ ಸಾಗಿಸುತ್ತಿದ್ದ ರೂ 13 ಲಕ್ಷ ಮೌಲ್ಯದ ಸೀರೆ ಜಪ್ತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2014, 19:47 IST
Last Updated 22 ಮಾರ್ಚ್ 2014, 19:47 IST

ಬೆಂಗಳೂರು: ದಾಖಲೆ ಪತ್ರಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ₨ 13 ಲಕ್ಷ ಮೌಲ್ಯದ 3,300 ಸೀರೆಗಳನ್ನು ವಶಪಡಿಸಿಕೊಂಡಿರುವ ಯಶವಂತಪುರ ಪೊಲೀಸರು, ಚಾಲಕ ನಾಗರಾಜ್‌ ಮತ್ತು ಕ್ಲೀನರ್‌ ಮಂಜುನಾಥ್‌ ಎಂಬುವರನ್ನು ಬಂಧಿಸಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ­ಯಲ್ಲಿ ವಾಹನಗಳ ತಪಾಸಣೆ ನಡೆಸಲು ಚುನಾವಣಾಧಿಕಾರಿಗಳು ಹಾಗೂ ಪೊಲೀಸರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿದೆ. ಈ ತಂಡ ಸಂಜೆ 4.30ರ ಸುಮಾರಿಗೆ ಗೊರಗುಂಟೆಪಾಳ್ಯದ ಬಳಿ ಕರ್ತವ್ಯ ನಿರ್ವಹಿಸುತ್ತಿತ್ತು. ಆಗ ತುಮ­ಕೂರು ರಸ್ತೆ ಮಾರ್ಗವಾಗಿ ಬಂದ ಲಾರಿ­ಯಲ್ಲಿ (ಕೆಎ 27 ಎ 4273) ಸೀರೆಗಳ ಬಂಡಲ್‌ಗಳಿದ್ದವು. ಆ ಸೀರೆಗಳಿಗೆ ಸಂಬಂಧಪಟ್ಟ ದಾಖಲೆಗಳು ಇರಲಿಲ್ಲ­ವಾ­ದ್ದರಿಂದ ಲಾರಿಯನ್ನು ಜಪ್ತಿ ಮಾಡಿ ಚಾಲಕರನ್ನು ಬಂಧಿಸಲಾಗಿದೆ’ ಎಂದು ಉತ್ತರ ವಿಭಾಗದ ಡಿಸಿಪಿ ಸಂದೀಪ್ ಪಾಟೀಲ್ ತಿಳಿಸಿದರು.

‘ಮಾರಾಟ ಮಾಡುವ ಉದ್ದೇಶ­ದಿಂದ ಸೀರೆಗಳನ್ನು ತಿಪಟೂರಿ­ನಿಂದ ಚಿಕ್ಕ­ಪೇಟೆಗೆ ಕೊಂಡೊಯ್ಯಲಾಗು­ತ್ತಿತ್ತು ಎಂದು ಚಾಲಕ ನಾಗರಾಜ್ ಹೇಳಿಕೆ ಕೊಟ್ಟಿ­ದ್ದಾನೆ. ಆದರೆ, ಅವರ ಬಳಿ ಸೂಕ್ತ ದಾಖಲೆಗಳಿಲ್ಲ. ಲೋಕಸಭಾ ಚುನಾ­ವಣೆ ಹಿನ್ನೆಲೆಯಲ್ಲಿ ಮತದಾರ­ರಿಗೆ ಹಂಚಲು ಸೀರೆಗಳನ್ನು ಸಾಗಿಸಲಾಗು­ತ್ತಿತ್ತೇ ಎಂಬ ಬಗ್ಗೆ ಇನ್ನು ಖಚಿತ ಮಾಹಿತಿ ಸಿಕ್ಕಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.