ADVERTISEMENT

ಅಕ್ರಮ ಕಟ್ಟಡ ನೆಲಸಮ: 43 ಎಕರೆ ಬಿಡಿಎ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2011, 19:30 IST
Last Updated 21 ಮಾರ್ಚ್ 2011, 19:30 IST

ಬೆಂಗಳೂರು: ನಗರದ ಗಿಡದಕೋನೇನಹಳ್ಳಿ ಗ್ರಾಮದ ಬಳಿಯ ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಶೆಡ್‌ಗಳನ್ನು ಸೋಮವಾರ ತೆರವುಗೊಳಿಸಿದ ಬಿಡಿಎ ಸಿಬ್ಬಂದಿ ಸುಮಾರು 150 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡರು. ವಿಶ್ವೇಶ್ವರಯ್ಯ ಬಡಾವಣೆಯ ಏಳು ಮತ್ತು ಎಂಟನೇ ಬ್ಲಾಕ್‌ಗಳ ನಿರ್ಮಾಣಕ್ಕಾಗಿ ಬಿಡಿಎ ಈ ಹಿಂದೆ ಗಿಡದಕೋನೇನಹಳ್ಳಿ ಗ್ರಾಮದ ಸರ್ವೆ ನಂ.38 ಮತ್ತು 39ರಲ್ಲಿ ಸುಮಾರು 43.14 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿತ್ತು.

ಅಲ್ಲದೇ ಆ ಜಾಗದಲ್ಲಿ ನಿವೇಶನಗಳನ್ನು ಮಾಡಿ 2003-04ರಲ್ಲಿ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದು ಬಿಡಿಎ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆದರೆ ಆ ಜಾಗದಲ್ಲಿ ಕೆಲ ವ್ಯಕ್ತಿಗಳು ಅಕ್ರಮವಾಗಿ ಶೆಡ್‌ಗಳನ್ನು ನಿರ್ಮಿಸಿದ್ದರು. ಆದ್ದರಿಂದ ಆ ಶೆಡ್‌ಗಳನ್ನು ತೆರವುಗೊಳಿಸಿ 43.14 ಎಕರೆ ಭೂಮಿಯನ್ನು ವಶಪಡಿಸಿಕೊಳ್ಳಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.