ADVERTISEMENT

ಅನುಗ್ರಹದಲ್ಲಿ ವಾಸ್ತು ದೋಷ!

​ಪ್ರಜಾವಾಣಿ ವಾರ್ತೆ
Published 20 ಮೇ 2018, 19:30 IST
Last Updated 20 ಮೇ 2018, 19:30 IST
ಅನುಗ್ರಹದಲ್ಲಿ ವಾಸ್ತು ದೋಷ!
ಅನುಗ್ರಹದಲ್ಲಿ ವಾಸ್ತು ದೋಷ!   

ಬೆಂಗಳೂರು: ವಾಸ್ತು ಸರಿಯಿಲ್ಲ ಎಂಬ ಕಾರಣಕ್ಕೆ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯವರ ಅಧಿಕೃತ ನಿವಾಸ ’ಅನುಗ್ರಹ’ದಲ್ಲಿ ತಂಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಗೊತ್ತಾಗಿದೆ.

ಅನುಗ್ರಹದಲ್ಲಿ ವಾಸ್ತು ಸರಿಯಿಲ್ಲ ಎಂದು ವಾಸ್ತು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಿಂದ ಏಳಿಗೆಗೆ ತೊಂದರೆಯಾಗಲಿ. ಹೀಗಾಗಿ ಈ ಮನೆಯಲ್ಲಿ ವಾಸ್ತವ್ಯ ಮಾಡದಿರುವುದು ಉತ್ತಮ ಎಂದೂ ಅವರು ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ, ಮಂತ್ರಿಯಾದವರು ಅನುಗ್ರಹದಲ್ಲಿ ನೆಲೆಸಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಹೀಗಾಗಿ ಮುಖ್ಯಮಂತ್ರಿಯಾದವರು ’ಕಾವೇರಿ’ ಅಥವಾ ’ಕೃಷ್ಣ’ದಲ್ಲಿ ತಂಗಲು ಇಷ್ಟಪಡುತ್ತಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT