ADVERTISEMENT

ಅನುರಾಗ್‌ ತಿವಾರಿ ಸಾವು: ನಗರಕ್ಕೆ ಎಸ್‌ಐಟಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2017, 19:43 IST
Last Updated 1 ಜೂನ್ 2017, 19:43 IST
ಅನುರಾಗ್‌
ಅನುರಾಗ್‌   

ಬೆಂಗಳೂರು: ಆಹಾರ ಇಲಾಖೆ ಆಯುಕ್ತರಾಗಿದ್ದ ಐಎಎಸ್‌ ಅಧಿಕಾರಿ ಅನುರಾಗ್‌ ತಿವಾರಿ ಸಾವಿನ ತನಿಖೆ ಕೈಗೆತ್ತಿಕೊಂಡಿರುವ ಉತ್ತರಪ್ರದೇಶದ ವಿಶೇಷ ತನಿಖಾ ತಂಡ (ಎಸ್‌ಐಟಿ) ನಗರಕ್ಕೆ ಗುರುವಾರ ಬಂದಿದೆ.

ಅವಿನಾಶ್‌ ಕುಮಾರ್‌ ಮಿಶ್ರಾ ಮತ್ತು ಸಾಹಿ ಅವರನ್ನೊಳಗೊಂಡ ತಂಡ ಮಾಹಿತಿ ಸಂಗ್ರಹಿಸುತ್ತಿದೆ. ಈ ಅಧಿಕಾರಿಗಳ ಜೊತೆ ತಿವಾರಿ ಸಹೋದರ ಮಯಾಂಕ್‌ ತಿವಾರಿ ಕೂಡಾ ಬಂದಿದ್ದಾರೆ.

ಕನ್ನಿಂಗ್‌ಹ್ಯಾಂ ರಸ್ತೆಯಲ್ಲಿರುವ ಆಹಾರ ಇಲಾಖೆಯ ಕಚೇರಿ ಮತ್ತು ಸದಾಶಿವನಗರದಲ್ಲಿರುವ  ತಿವಾರಿ ತಂಗಿದ್ದ ಅತಿಥಿಗೃಹಕ್ಕೆ ತೆರಳಿ ಕೆಲವು ದಾಖಲೆಗಳನ್ನು ತಂಡ ಪರಿಶೀಲಿಸಿದೆ.

ADVERTISEMENT

ಅನುರಾಗ್ ತಿವಾರಿ ಮತ್ತು ಹಿರಿಯ ಅಧಿಕಾರಿ ಮಧ್ಯೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಸುವ ಸಾಧ್ಯತೆ ಇದೆ.

‘ಆಹಾರ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣವನ್ನು ಬಯಲಿಗೆ ಎಳೆಯಲು ತಿವಾರಿ ಪ್ರಯತ್ನಿಸಿದ್ದರು. ಇದರಿಂದಾಗಿ ಅವರ ಕೊಲೆ ನಡೆದಿದೆ’ ಎಂದು ಕುಟುಂಬದ ಸದಸ್ಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.