ಬೆಂಗಳೂರು: `ನಿರಂತರ ಹೊಸದಾದ ಅನ್ವೇಷಣೆಗಳಿಂದ ಸಮಾಜವು ಬದಲಾವಣೆಯಾಗುತ್ತದೆ. ಅಂತಹ ಬದಲಾವಣೆಗೆ ಇಂದಿನ ಶಿಕ್ಷಣವು ಆಸ್ಪದ ನೀಡಬೇಕು~ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ. ರವಿ ಅಭಿಪ್ರಾಯಪಟ್ಟರು.
ಮಂಗಳವಾರ ನಡೆದ ಶ್ರೀಮತಿ ವಿ.ಎಚ್.ಡಿ. ಕೇಂದ್ರೀಯ ಗೃಹ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿ ಸಾಂಸ್ಕೃತಿಕ ಸಂಘ, ಕನ್ನಡ ಸಂಘ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
`ಸಮಾಜವು ಹರಿಯುವ ನೀರಾಗಬೇಕು. ಅದಕ್ಕಾಗಿ ಸಮಾಜದಲ್ಲಿ ಅನ್ವೇಷಣೆಗೆ ಹೆಚ್ಚಿನ ಅವಕಾಶಗಳಿರಬೇಕು. ಪ್ರಯೋಗಶೀಲತೆಗೆ ಹೆಚ್ಚಿನ ಆದ್ಯತೆಯಿರಬೇಕು~ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ದಿನೇಶ್ ಗುಂಡೂರಾವ್, ಸಂಗೀತ ನಿರ್ದೇಶಕ ಗುರುಕಿರಣ್, ಬಿಬಿಎಂಪಿ ಸದಸ್ಯ ಎ.ಎಲ್. ಶಿವಕುಮಾರ್, ಪ್ರಾಂಶುಪಾಲ ಪ್ರೊ.ಓ. ಓಬಯ್ಯ, ವಿದ್ಯಾರ್ಥಿ ಸಾಂಸ್ಕೃತಿಕ ಸಂಘದ ಸಂಚಾಲಕಿ ಡಾ. ಎಸ್.ಎನ್. ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.