ADVERTISEMENT

ಅಪಘಾತ: ಕಾರಿನ ಚಾಲಕನಿಂದ ಹಲ್ಲೆ

​ಪ್ರಜಾವಾಣಿ ವಾರ್ತೆ
Published 27 ಜನವರಿ 2012, 19:30 IST
Last Updated 27 ಜನವರಿ 2012, 19:30 IST

ಬೆಂಗಳೂರು:  ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದರಿಂದ ಕಾರಿನ ಚಾಲಕ ಹಾಗೂ ಆತನ ಸ್ನೇಹಿತರು, ಬೈಕ್‌ನಲ್ಲಿದ್ದ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ತಿಲಕ್‌ನಗರ ವ್ಯಾಪ್ತಿಯ ಅರಸು ಕಾಲೋನಿಯಲ್ಲಿ ರಾತ್ರಿ ನಡೆದಿದೆ.

ಅರಸು ಕಾಲೋನಿಯ ರಘು ಹಾಗೂ ಕಾರ್ಪೋರೇಶನ್ ಕಾಲೋನಿಯ ಮಂಜುನಾಥ್ ಅವರು ಹಲ್ಲೆಗೊಳಗಾದವರು.  ಈ ಇಬ್ಬರು ಶುಕ್ರವಾರ ಬೈಕ್‌ನಲ್ಲಿ ಹೋಗುತ್ತಿದ್ದರು. ಹಿಂದಿನಿಂದ ಬಂದ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಚಾಲಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕಾರಿನಲ್ಲಿದ್ದ ನಾಲ್ಕೈದು ಜನ ರಘು ಹಾಗೂ ಮಂಜುನಾಥ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.