ಬೆಂಗಳೂರು: ತುಮಕೂರು ರಸ್ತೆಯ ಎಂಟನೇ ಮೈಲಿ ಬಳಿ ಬುಧವಾರ ಬೈಕ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಕಂಪೆನಿಯೊಂದರ ಉದ್ಯೋಗಿ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಬ್ಯಾಡರಹಳ್ಳಿ ಸಮೀಪದ ಬಿಇಎಲ್ ಲೇಔಟ್ ನಿವಾಸಿ ರಮೇಶ್ (23) ಮೃತಪಟ್ಟವರು. ತಮಿಳುನಾಡು ಮೂಲದ ರಮೇಶ್, ಪೀಣ್ಯ ಎರಡನೇ ಹಂತದಲ್ಲಿರುವ ಆದರ್ಶ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಗಜೇಂದ್ರ ಅವರ ಜತೆ ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಆವರಣದಲ್ಲಿ ನಡೆಯುತ್ತಿರುವ ಮೇಳಕ್ಕೆ ಬೈಕ್ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೀಣ್ಯ ಎಂಟನೇ ಮೈಲಿ ಬಳಿ ಎದುರಿನಿಂದ ಬೈಕ್ ಓಡಿಸಿಕೊಂಡು ಬಂದ ಉಮೇಶ್, ರಮೇಶ್ರ ಬೈಕ್ಗೆ ವಾಹನ ಗುದ್ದಿಸಿದ್ದಾರೆ. ಈ ವೇಳೆ ರಸ್ತೆ ವಿಭಜಕದ ಮೇಲೆ ಬಿದ್ದ ರಮೇಶ್ರ ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.