ADVERTISEMENT

ಅಮಾನತ್‌ ಬ್ಯಾಂಕ್‌ ವಿಲೀನ ಬೇಡ: ಷರೀಫ್‌

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2014, 19:31 IST
Last Updated 6 ಮಾರ್ಚ್ 2014, 19:31 IST

ಬೆಂಗಳೂರು: ಅಮಾನತ್‌ ಕೋ–ಆಪರೇ­ಟಿವ್ ಬ್ಯಾಂಕ್‌ ಅನ್ನು ಬೇರೆ ಬ್ಯಾಂಕ್‌ಗಳ ಜತೆ ವಿಲೀನ ಮಾಡುವುದಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್‌ ಮುಖಂಡ ಸಿ.ಕೆ.ಜಾಫರ್‌ ಷರೀಫ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಪಡಿಸಿದ್ದಾರೆ.

ಷರೀಫ್‌ ಅವರು ನಿಯೋಗದಲ್ಲಿ ಗುರುವಾರ ರಾತ್ರಿ ಮುಖ್ಯಮಂತ್ರಿ­ಯವ­ರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಪತ್ರ ಸಲ್ಲಿಸಿದರು. ಅಮಾನತ್‌ ಕೋ–ಆಪರೇಟಿವ್‌ ಬ್ಯಾಂಕ್‌ ಹಾಗೆಯೇ ಉಳಿಯಬೇಕು. ಅಕ್ರಮಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.