ADVERTISEMENT

ಅಮಿಕಸ್‌ ಕ್ಯೂರಿ ನೇಮಕ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST

ಬೆಂಗಳೂರು: ರಾಜ್ಯದಲ್ಲಿ ಬಾಲನ್ಯಾಯ (ಮಕ್ಕಳ ಕಾಳಜಿ ಹಾಗೂ ಸುರಕ್ಷತೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತಂತೆ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ (ಪಿಐಎಲ್‌) ವಕೀಲ ಚಂದ್ರಕಾಂತ ಆರಿಗ ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ (ಕೋರ್ಟ್‌ಗೆ ಸಹಕರಿಸುವ ವಕೀಲ) ನೇಮಕ ಮಾಡಲಾಗಿದೆ.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ದಾಖಲಿಸಿಕೊಂಡಿರುವ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಈ ಕುರಿತು ಆದೇಶಿಸಿದೆ.

ದಾಖಲೆಗಳನ್ನು ಚಂದ್ರಕಾಂತ್‌ಗೆ ಒದಗಿಸುವಂತೆ ರಿಜಿಸ್ಟ್ರಾರ್‌ ಅವರಿಗೆ ನಿರ್ದೇಶಿಸಿದ ನ್ಯಾಯಪೀಠ,  ವಿಚಾರಣೆಯನ್ನು ಜೂನ್‌ 11ಕ್ಕೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.