ADVERTISEMENT

ಅವ್ಯವಹಾರ: ವಿಶೇಷ ಸಭೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 10 ಜೂನ್ 2013, 19:51 IST
Last Updated 10 ಜೂನ್ 2013, 19:51 IST

ಬೆಂಗಳೂರು: ಬಿಬಿಎಂಪಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಬಹಿರಂಗಪಡಿಸಿದ್ದು, ಈ ವಿಷಯವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಬೇಕು ಎಂದು ಬಿಬಿಎಂಪಿ  ವಿರೋಧ ಪಕ್ಷದ ನಾಯಕ ಎಂ.ಕೆ. ಗುಣಶೇಖರ್ ಒತ್ತಾಯಿಸಿದರು.

ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಬಿಎಂಪಿಯಲ್ಲಿ ಬಿಜೆಪಿ ನಡೆಸಿದ ಕರ್ಮಕಾಂಡವೇ  ಸಿಎಜಿ ವರದಿಯಲ್ಲಿ ಪ್ರತಿಬಿಂಬಿತವಾಗಿದೆ' ಎಂದು ಆರೋಪಿಸಿದರು.

`ಸಿಎಜಿ ವರದಿ ಪ್ರಕಾರ ಬಿಬಿಎಂಪಿಗೆ ರೂ 140 ಕೋಟಿಯಷ್ಟು ನಷ್ಟ ಉಂಟಾಗಿದೆ. ಈ ನಷ್ಟಕ್ಕೆ ಯಾರು ಹೊಣೆ ಮತ್ತು ಅದನ್ನು ತುಂಬಿ ಕೊಡುವವರು ಯಾರು' ಎಂದು ಪ್ರಶ್ನಿಸಿದರು.

`ಸಿಎಜಿ ವರದಿ ವಿಧಾನ ಮಂಡಲದಲ್ಲಿ ಮಂಡನೆಯಾಗಿದ್ದು, ಅದನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ವಿಳಂಬವಾಗುತ್ತದೆ. ಹೀಗಾಗಿ ಬಿಬಿಎಂಪಿ ಈ ಸಂಬಂಧ ಶೀಘ್ರ ಕ್ರಮ ಜರುಗಿಸುವ ಅಗತ್ಯವಿದೆ' ಎಂದು ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.