ADVERTISEMENT

ಆರೋಗ್ಯ ಅರಿವು ಅಭಿಯಾನ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2013, 19:36 IST
Last Updated 6 ಡಿಸೆಂಬರ್ 2013, 19:36 IST

ಪೀಣ್ಯ ದಾಸರಹಳ್ಳಿ: ಉತ್ತಮ ಪರಿಸರದ ಕೊರತೆ ಎದುರಾಗಿ­ರುವು­ದರಿಂದ ನಗರ ಪ್ರದೇಶದ ಮಕ್ಕಳು ತೀವ್ರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಗ್ರಂಥಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ತಜ್ಞೆ ಡಾ.ವಿಜಯಲಕ್ಷ್ಮೀ ದೇಶಮಾನೆ ಆತಂಕ ವ್ಯಕ್ತಪಡಿಸಿದರು.

ಅವರು ದಾಸರಹಳ್ಳಿಯ ಶಾರದ ವಿದ್ಯಾಮಂದಿರದಲ್ಲಿ ಹಸಿರು ಪ್ರತಿಷ್ಠಾನ ಆಯೋಜಿಸಿದ್ದ ಆರೋಗ್ಯದ ಅರಿವು ಅಭಿಯಾನ ಕಾರ್ಯಕ್ರಮ­ವನ್ನು ಉದ್ಘಾಟಿಸಿ ಮಾತನಾಡಿದರು.

ಅತಿಯಾದ ಒತ್ತಡವು ಕೂಡ ಮಕ್ಕಳಿಗೆ ದೈಹಿಕ ಕಾಯಿಲೆಯನ್ನು ತಂದೊಡ್ಡುತ್ತಿದೆ.ಇದಕ್ಕೆ ಪೋಷಕರು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು. ಹಸಿರು ಪ್ರತಿಷ್ಠಾನದ ಗೌರವಾಧ್ಯಕ್ಷ ಎಂ.ಆರ್‌.ವೆಂಕಟೇಶ್‌ ಇ­ದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.