ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಲಂಚದ ಆಮಿಷವೊಡ್ಡಿದ್ದ ಆರೋಪದ ಮೇಲೆ ಸದಾಶಿವನಗರ ಪೊಲೀಸರು ಬಂಧಿಸಿರುವ ನ್ಯೂಸ್9 ಆಂಗ್ಲವಾಹಿನಿಯ ವರದಿಗಾರರಾದ ಶ್ರೇಯಸ್ ಮತ್ತು ಶ್ವೇತಾ ಅವರನ್ನು ಮಾ.13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಲೋಕಾಯುಕ್ತ ಕೋರ್ಟ್ ಮಂಗಳವಾರ ಆದೇಶ ಹೊರಡಿಸಿದೆ.
ಪ್ರತಿದೂರು: ‘ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಶ್ರೇಯಸ್ ಮತ್ತು ಶ್ವೇತಾ ಅವರು ಮಂಗಳವಾರ ಪ್ರತಿದೂರು ಕೊಟ್ಟಿದ್ದಾರೆ’ ಎಂದು ಹಿರಿಯ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದರು.
‘ಪ್ರಕರಣದ ಪ್ರಮುಖ ಆರೋಪಿ ವಾಹಿನಿಯ ಮುಖ್ಯಸ್ಥ ಮಹೇಂದ್ರ ಮಿಶ್ರಾ ಅವರು ತಲೆಮರೆಸಿಕೊಂಡಿದ್ದು, ಪತ್ತೆ ಕಾರ್ಯ ಮುಂದುವರಿದಿದೆ’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.