ADVERTISEMENT

‘ಆಸ್ಟ್ರೇಲಿಯಾದವರು ಅರ್ಥ ಮಾಡಿಕೊಂಡಿದ್ದಾರೆ’

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2018, 19:30 IST
Last Updated 25 ಏಪ್ರಿಲ್ 2018, 19:30 IST

ಬೆಂಗಳೂರು: ‘ಆಸ್ಟ್ರೇಲಿಯಾದವರು ನಮ್ಮನ್ನು ಅರ್ಥ ಮಾಡಿಕೊಂಡಿದ್ದಾರೆ. ಆದರೆ, ನಮ್ಮವರೇ ನಮ್ಮನ್ನು ಅರ್ಥ ಮಾಡಿಕೊಂಡಿಲ್ಲ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

‘ಆಸ್ಟ್ರೇಲಿಯಾ ಕಾನ್ಸುಲೇಟ್‌ ಜನರಲ್‌ ಜಾನ್ ಬೋನರ್ ಭೇಟಿ ಮಾಡಿದ ಸಂದರ್ಭದಲ್ಲಿ ನಮ್ಮ ಕಾಲದ(ಮುಖ್ಯಮಂತ್ರಿ ಮತ್ತು ಪ್ರಧಾನಿ ಆಗಿದ್ದಾಗ) ಆಡಳಿತ ಚೆನ್ನಾಗಿತ್ತು ಎಂದು ಕೊಂಡಾಡಿದರು’ ಎಂದು ಅವರು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ರಾಜ್ಯಗಳಿಗೆ ಭೇಟಿಕೊಟ್ಟು ಪರಿಸ್ಥಿತಿ ಅವಲೋಕನ ಮಾಡುತ್ತಾರೆ. ಇದು ಸಹಜ ಪ್ರಕ್ರಿಯೆ. ರಾಜ್ಯದ ವಿವಿಧ ವಿಷಯಗಳು ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.