
ಪ್ರಜಾವಾಣಿ ವಾರ್ತೆಬೆಂಗಳೂರು: ಆಸ್ತಿ ತೆರಿಗೆಯನ್ನು ಏ.30 ರ ಒಳಗೆ ಪಾವತಿಸಿದರೆ ಬಿಬಿಎಂಪಿಯು ಆಸ್ತಿ ತೆರಿಗೆಯಲ್ಲಿ ಶೇ 5 ರಷ್ಟು ರಿಯಾಯಿತಿ ನೀಡುತ್ತಿದೆ. ನಗರದ ಜನತೆಯೂ ಕೂಡ ಆಸ್ತಿ ತೆರಿಗೆಯನ್ನು ಪಾವತಿಸಲು ಹಿಂದೆ ಬೀಳುತ್ತಿಲ್ಲ.
ಆದರೆ, ಈ ಆಸ್ತಿ ತೆರಿಗೆ ಪಾವತಿಯನ್ನು ಮೇ 15 ರ ವರೆಗೆ ವಿಸ್ತರಿಸಬೇಕು ಎಂದು ಶಾಸಕ ಪಿ.ಜಿ.ಆರ್.ಸಿಂಧ್ಯ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಈ ತಿಂಗಳು ಮಕ್ಕಳ ಶಾಲಾ ಪ್ರವೇಶಕ್ಕೆ ಹಣ ಪಾವತಿಸಬೇಕಾಗಿದೆ. ಮೇ 1 ರ ನಂತರ ಬರುವಂತಹ ತಿಂಗಳ ವೇತನದಲ್ಲಿ ಆಸ್ತಿ ತೆರಿಗೆ ಪಾವತಿಸಬೇಕಾಗಿದೆ. ಆದ್ದರಿಂದ ಆಸ್ತಿ ತೆರಿಗೆಯ ದಿನಾಂಕ ವಿಸ್ತರಿಸಬೇಕು ಎಂದು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.